22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

ಪುಂಜಾಲಕಟ್ಟೆ: ಆ.9ರಂದು ನಿಧನರಾದ ಪಿ. ವೆಂಕಟರಮಣ ರವರ ಆತ್ಮಕ್ಕೆ ಶಾಂತಿಯನ್ನು ಕೋರಿ ನುಡಿನಮನ ಕಾರ್ಯಕ್ರಮವು ಆ.10ರಂದು ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್‌ ಸ್ಕೂಲ್ ನ ಪ್ರೌಢಶಾಲಾ ವಿಭಾಗದಲ್ಲಿ ನಡೆಯಿತು.

ಇವರು ಕರ್ನಾಟಕ ಪಬ್ಲಿಕ್‌ ಸ್ಕೂಲ್ ಪುಂಜಾಲಕಟ್ಟೆಯ ಸ್ಥಾಪಕ ಪ್ರಾಂಶುಪಾಲರಾಗಿ, ಮುಂದಕ್ಕೆ ಮೈಸೂರು ವಿಭಾಗೀಯ ಸಹನಿರ್ದೇಶಕರಾಗಿ ನಿವೃತ್ತರಾಗಿದ್ದಂತಹ ವೆಂಕಟರಮಣ ಪಿ. ರವರು ಆ.9ರಂದು ದೈವಾಧೀನರಾದರು.

ಮೃತರು ಬೆಳ್ತಂಗಡಿ ಶಿಕ್ಷಣಾಧಿಕಾರಿ ಕಛೇರಿಯಲ್ಲಿ ಸಹಾಯಕ ಶಿಕ್ಷಣಾಧಿಕಾರಿಯಾಗಿ, ಮುಂದಕ್ಕೆ ಜಿಲ್ಲಾ ಶಿಕ್ಷಣಾಧಿಕಾರಿಯಾಗಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ, ಸಿಟಿಇ ಪ್ರಾಂಶುಪಾಲರಾಗಿ, ವಿಭಾಗೀಯ ಜಂಟಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವರು. ಆ ಬಳಿಕವೂ ನವೋದಯ ಮುಂಡಾಜೆಯಲ್ಲಿ ಪ್ರಾಂಶುಪಾಲರಾಗಿ, ಪ್ರಸನ್ನ ಬಿ.ಇಡಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿರುವುದು ಇವರ ಸೇವಾ ತತ್ಪರತೆಗೆ ಹಿಡಿದಿರುವ ಕನ್ನಡಿಯಾಗಿದೆ.

ಸಂಸ್ಥೆಯ ಪ್ರಥಮ ದರ್ಜೆ ಸಹಾಯಕ ಪ್ರವೀಣ್ ಕುಮಾರ್ ವೆಂಕಟರಮಣ ಪಿ ರವರ ಸೇವಾ ಬದ್ಧತೆ, ಶಿಸ್ತು, ಕಲೆಗೆ ಪ್ರೋತ್ಸಾಹ, ಸಹಕಾರ ಭಾವನೆ, ನುಡಿದಂತೆ ನಡೆದಿರುವ ಕಾರ್ಯವೈಖರಿ ಇತ್ಯಾದಿ ವಿಚಾರಗಳ ಬಗ್ಗೆ ಮೆಲುಕು ಹಾಕುತ್ತಾ ಅವರಿಗೆ ನುಡಿನಮನ ಸಲ್ಲಿಸಿದರು. ಬಳಿಕ ಒಂದು ನಿಮಿಷದ ಮೌನಪ್ರಾರ್ಥನೆ ಸಲ್ಲಿಸಿ, ಮೃತರ ಭಾವಚಿತ್ರಕ್ಕೆ ಪುಷ್ಪಾಂಜಲಿಯನ್ನು ಸಂಸ್ಥೆಯ ಉಪಪ್ರಾಂಶುಪಾಲ ಉದಯಕುಮಾರ್ ಪಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಅರ್ಪಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉಪಪ್ರಾಂಶುಪಾಲಉದಯ ಕುಮಾರ್ ಬಿ, ಎಲ್ಲಾ ಶಿಕ್ಷಕರು, ಸಿಬ್ಬಂದಿಗಳು ಹಾಗೂ ಶಾಲಾ ಹಳೆವಿದ್ಯಾರ್ಥಿ ಭಾಸ್ಕರ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ಸಹಶಿಕ್ಷಕ ಹರಿಪ್ರಸಾದ್ ಆರ್ ಸರ್ವರನ್ನು ಬರಮಾಡಿಕೊಂಡರು. ಸಹಶಿಕ್ಷಕ ಧರಣೇಂದ್ರ ಕೆ. ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್ ಎಸ್ ಎಲ್ ಸಿ ವಿಧ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

Suddi Udaya

ಸಾಲುಮರದ ತಿಮ್ಮಕ್ಕ ವೃಕ್ಷ ಉದ್ಯಾನವನ ಲೋಕಾರ್ಪಣೆ

Suddi Udaya

ಆರೋಗ್ಯ ಸೇವೆಯ ಬೆನ್ನೆಲುಬಾದ ಆಶಾ ಕಾರ್ಯಕರ್ತೆಯರಿಗೆ ನ್ಯಾಯ ನೀಡಿ: ಭಾರತೀಯ ಮಜ್ದೂರು ಸಂಘ ಆಗ್ರಹ

Suddi Udaya

ಸೆ.25 -ಅ.8: ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಕಡಿರುದ್ಯಾವರ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya
error: Content is protected !!