22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

ಸುಲ್ಕೇರಿ : ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಹಾಗೂ ಗ್ರಾಮ ಪಂಚಾಯತ್ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರಂಗೋಲಿ ಸ್ಪರ್ಧೇ, ಹೂಗುಚ್ಛ ಸ್ಪರ್ಧೆ, ಸಂಧಿ ಪಾರ್ದನ, ‘ಚೆನ್ನೆಮಣೆ ಸ್ಪರ್ಧೆ ಏರ್ಪಡಿಸಲಾಗಿತ್ತು


ಸಭಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ, ಕಾರ್ಯದರ್ಶಿ ಕೊರಗಪ್ಪ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಪ್ರತಿಮಾ, ವಲಯ ಮೇಲ್ವಿಚಾರಕಾರದ ಜಯಾನಂದ, ಸ್ವಸ್ತಿಕ್ ಜೈನ್, ಬ್ಲಾಕ್ ಮೆನೇಜರ್ ನಿತೇಶ್, ಸಿಎ ಬ್ಯಾಂಕ್ ಸದಾನಂದ ಗೌಡ, ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಎಮ್.ಬಿ ಕೆ’ ಎಸ್.ಸಿ.ಆರ್.ಪಿ ಪಶುಸಖಿ, ಬಿಸಿ ಸಖಿ, FLCRP ಕೃಷಿ ಉದ್ಯೋಗ ಸಖಿ, ಎಲ್ಲಾ ಸಂಜೀವಿನಿ ಸದಸ್ಯರು ,ಸ್ತ್ರಿಶಕ್ತಿ ಸದಸ್ಯರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

ಕಾರ್ಯಕ್ರಮಕ್ಕೆ ಹೆಚ್ಚಿನ ಸಂಜೀವಿನಿ ಸದಸ್ಯರು ಆಟಿ ತಿಂಗಳಲ್ಲಿ ತಿನ್ನುವ ತಿನಿಸುಗಳನ್ನು ತರುವುದರ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಈ ಕಾರ್ಯಕ್ರಮದಲ್ಲಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಎರಡೂವರೆ ವರ್ಷ ಪೂರ್ಣಗೊಳಿಸಿರುವ ನಾರಾಯಣ ಪೂಜಾರಿ ಹಾಗೂ ಯಶೋದ ಬಂಗೇರ ಇವರಿಗೆ ಪಂಚಾಯತ್ ವತಿಯಿಂದ ಸನ್ಮಾನಿಸಲಾಯಿತು. ಹಾಗೂ ವಲಯ ಮೇಲ್ವಿಚರಕಾರದ ಜಯನಂದ ಹಾಗೂ ಬ್ಲಾಕ್ ಮೆನೇಜರ್ ನಿತೇಶ್ ರವರನ್ನು ಒಕ್ಕೂಟ ಹಾಗೂ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಬಿಸಿ ಸಖಿ ಚಂದ್ರಿಕಾ ನಿರೂಪಿಸಿ, ಎಮ್.ಬಿ.ಕೆ ವಿನುತಾ ಸ್ವಾಗತಿಸಿದರು. ಆಶಾ ಕಾರ್ಯಕರ್ತೆ ಹೇಮಾಲತ ಧನ್ಯವಾದವಿತ್ತರು.

Related posts

ಗೇರುಕಟ್ಟೆ: ಹುಚ್ಚು ನಾಯಿ ರೋಗ ನಿರೋಧಕ ಉಚಿತ ಲಸಿಕೆ

Suddi Udaya

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

Suddi Udaya

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಚಾರ ಸಂಕಿರಣ ಕಾರ್ಯಕ್ರಮ

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಧರ್ಮಸ್ಥಳ ನಾರ್ಯ ದಲ್ಲಿ ಸೇತುವೆ ಕುಸಿತ

Suddi Udaya

ಸ್ವಂತ ಮನೆಯ ಕನಸನ್ನು ನನಸಗಿಸಲು “ಡ್ರೀಮ್ ಡೀಲ್ ಗ್ರೂಪ್” ವಿಶಿಷ್ಟ ಸೇವಿಂಗ್ಸ್ ಪ್ಲಾನ್ ಯೋಜನೆ – ಕೇವಲ 1 ಸಾವಿರ ಪಾವತಿಸಿ ಮನೆ, ಕಾರು, ಬೈಕ್, ಚಿನ್ನ ಗೆಲ್ಲಿರಿ

Suddi Udaya
error: Content is protected !!