July 23, 2026
ಅಪರಾಧ ಸುದ್ದಿ

ಹಾಡು ಹಗಲೇ ಲಾಯಿಲದ ದೇಜಪ್ಪರ ಮನೆಗೆ ನುಗ್ಗಿದ ಕಳ್ಳರು: ರೂ.20 ಸಾವಿರ ನಗದು ಸಹಿತ ರೂ.40 ಸಾವಿರ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ : ಹಾಡು ಹಗಲೇ
ಲಾಯಿಲ ಗ್ರಾಮದ ನಿವಾಸಿ ದೇಜಪ್ಪ ಎಂಬವರ ಮನೆಗೆ ನುಗ್ಗಿದ ಕಳ್ಳರು ರೂ.20 ಸಾವಿರ ನಗದು ಸಹಿತ ಚಿನ್ನಾಭರಣ ಕಳವುಗೈದ ಘಟನೆ ಆ.10ರಂದು ವರದಿಯಾಗಿದೆ.
ಆ.10 ರಂದು ಬೆಳಿಗ್ಗೆ 8.30 ರಿಂದ ಸಂಜೆ 5.30ರ ಅವಧಿಯಲ್ಲಿ ದೇಜಪ್ಪರ ಮನೆಯಲ್ಲಿ ಯಾರು ಇಲ್ಲದ ವೇಳೆ ಯಾರೋ ಕಳ್ಳರು ಮನೆಯ ಬಲಬದಿ ಇರುವ ಸ್ಟೋರ್ ರೂಂ ನಿಂದ ಮರದ ಕಿಟಕಿಯನ್ನು ಯಾವುದೋ ಆಯುಧದಿಂದ ಮುರಿದು ಗೋಡ್ರೇಜ್ ನ ಬೀಗವನ್ನು ಅಲ್ಲಿಯೇ ಇಟ್ಟಿದ್ದ ಕೀಯಿಂದ ಲಾಕ್ ತೆಗೆದು ಗೊಡ್ರೇಜಿನಲ್ಲಿ ಇಟ್ಟಿರುವ ಸುಮಾರು ರೂ.20 ಸಾವಿರ ನಗದು ಮತ್ತು ಸುಮಾರು 8 ಗ್ರಾಂ ತೂಕದ ಚಿನ್ನಾಭರಣ ಅಂದಾಜು ಮೌಲ್ಯ ಸುಮಾರು 40ಸಾವಿರ ವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುವುದಾಗಿ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದೆ.
. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 73/2023 ಕಲಂ;454,380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಇಂದು ಮಂಗಳೂರಿಗೆ

Suddi Udaya

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಅಪ್ರಾಪ್ತ ಬಾಲಕರ ಮೇಲೆ ಪ್ರಕರಣ ದಾಖಲು

Suddi Udaya

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

Suddi Udaya

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕ್ರಮಕ್ಕೆ ವೇಣೂರು ಪೊಲೀಸ್ ಠಾಣೆಗೆ ಮನವಿ

Suddi Udaya
error: Content is protected !!