September 6, 2026
ಅಪರಾಧ ಸುದ್ದಿ

ಹಾಡು ಹಗಲೇ ಲಾಯಿಲದ ದೇಜಪ್ಪರ ಮನೆಗೆ ನುಗ್ಗಿದ ಕಳ್ಳರು: ರೂ.20 ಸಾವಿರ ನಗದು ಸಹಿತ ರೂ.40 ಸಾವಿರ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ : ಹಾಡು ಹಗಲೇ
ಲಾಯಿಲ ಗ್ರಾಮದ ನಿವಾಸಿ ದೇಜಪ್ಪ ಎಂಬವರ ಮನೆಗೆ ನುಗ್ಗಿದ ಕಳ್ಳರು ರೂ.20 ಸಾವಿರ ನಗದು ಸಹಿತ ಚಿನ್ನಾಭರಣ ಕಳವುಗೈದ ಘಟನೆ ಆ.10ರಂದು ವರದಿಯಾಗಿದೆ.
ಆ.10 ರಂದು ಬೆಳಿಗ್ಗೆ 8.30 ರಿಂದ ಸಂಜೆ 5.30ರ ಅವಧಿಯಲ್ಲಿ ದೇಜಪ್ಪರ ಮನೆಯಲ್ಲಿ ಯಾರು ಇಲ್ಲದ ವೇಳೆ ಯಾರೋ ಕಳ್ಳರು ಮನೆಯ ಬಲಬದಿ ಇರುವ ಸ್ಟೋರ್ ರೂಂ ನಿಂದ ಮರದ ಕಿಟಕಿಯನ್ನು ಯಾವುದೋ ಆಯುಧದಿಂದ ಮುರಿದು ಗೋಡ್ರೇಜ್ ನ ಬೀಗವನ್ನು ಅಲ್ಲಿಯೇ ಇಟ್ಟಿದ್ದ ಕೀಯಿಂದ ಲಾಕ್ ತೆಗೆದು ಗೊಡ್ರೇಜಿನಲ್ಲಿ ಇಟ್ಟಿರುವ ಸುಮಾರು ರೂ.20 ಸಾವಿರ ನಗದು ಮತ್ತು ಸುಮಾರು 8 ಗ್ರಾಂ ತೂಕದ ಚಿನ್ನಾಭರಣ ಅಂದಾಜು ಮೌಲ್ಯ ಸುಮಾರು 40ಸಾವಿರ ವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುವುದಾಗಿ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದೆ.
. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 73/2023 ಕಲಂ;454,380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Suddi Udaya

ಮದ್ದಡ್ಕದಲ್ಲಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿ :ಗಂಭೀರ ಗಾಯ

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ವೇಣೂರು: ಪೋಕ್ಸೋ ಪಕ್ರರಣ, ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯನಿಗೆ ಹಲ್ಲೆ ಪ್ರಕರಣ ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ಪ್ರಕಟ

Suddi Udaya
error: Content is protected !!