23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

ನಡ: ಬೆಳ್ತಂಗಡಿ ತಾಲ್ಲೂಕು ಮಟ್ಟದ ಯೋಗ ಸ್ಪರ್ದೆ ಸರಕಾರಿ ಪ್ರೌಢಶಾಲೆ ನಡದಲ್ಲಿ ಆಯೋಜಿಸಲಾಗಿದ್ದು, ಇದರ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿರೂಪಾಕ್ಷಪ್ಪ ರವರು ನೆರವೇರಿಸಿದರು.

ಈ ಸ್ಪರ್ಧೆಯನ್ನು ಯೋಗಾಸನ ಮುದ್ರೆಯ ಪ್ರತಿಕೃತಿಯನ್ನು ಅನಾವರಣಗೊಳಿಸಿ ಹಾಗೂ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಯೋಗವು ನಮ್ಮ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತೀ ಅಗತ್ಯವೆಂದು ಹೇಳಿದರು. ನಡ ಗ್ರಾಮ ಪಂಚಾಯತಿನ ನಿರ್ಗಮನ ಅಧ್ಯಕ್ಷ ವಿಜಯ ಗೌಡ ಇವರು ಅಧ್ಯಕ್ಷತೆಯನ್ನು ವಹಿಸಿದ್ದು, ಭಾರತೀಯ ಪರಂಪರೆಯಾದ ಯೋಗವನ್ನು ಬದುಕಿನಲ್ಲಿ ಅಳವಡಿಸಿಕೊಂಡು, ದೇಶದ ಘನತೆಯನ್ನು ಹೆಚ್ಚಿಸುವವಲ್ಲಿ ಕಾಣಿಕೆ ನೀಡಲು ಕರೆ ನೀಡಿದರು.

ಸಮಾರಂಭದಲ್ಲಿ ಬೆಳ್ತಂಗಡಿ ತಾಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಎಸ್.ಡಿ.ಎಂ.ಸಿ.ಉಪಾಧ್ಯಕ್ಷರಾದ ಸುಧಾಕರ್, ಸದಸ್ಯರುಗಳಾದ ಲಕ್ಷ್ಮಣ ನಾಯ್ಕ, ಆನಂದ ಶೆಟ್ಟಿ ಉಪಸ್ಥಿತರಿದ್ದರು.

ಮುಖ್ಯಶಿಕ್ಷಕ ಯಾಕೂಬ್ ಎಸ್ ಸ್ವಾಗತಿಸಿ, ದೈಹಿಕ ಶಿಕ್ಚಣ ಶಿಕ್ಷಕಿ ಶ್ರೀಮತಿ ಸುಜಯ ಬಿ ಧನ್ಯವಾದವಿತ್ತರು. ಹಿಂದಿ ಶಿಕ್ಷಕ ಮೋಹನ ಬಾಬು ಕಾರ್ಯಕ್ರಮದ ನಿರೂಪಣೆಗೈದರು. ತಾಲೂಕಿನಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದಿಂದ ನೂರಕ್ಕೂ ಮಿಕ್ಕಿದ ಸ್ಪರ್ಧಾಳುಗಳು ಭಾಗವಹಿಸುತ್ತಿದ್ದಾರೆ.

Related posts

ಧಮ೯ಸ್ಥಳ ಗ್ರಾಮದಲ್ಲಿ ಶವ ಹೂತು ಹಾಕಿದ ದೂರು ನೀಡಿದ ಪ್ರಕರಣ: ದೂರುದಾರ ಫೋಟೋ ಹೊರತುಪಡಿಸಿ ಯಾವುದೇ ಕಳೆಬರಹವನ್ನು ಪೊಲೀಸ್ ಠಾಣೆಗೆ ನೀಡಿಲ್ಲ: ಪೊಲೀಸ್ ವರಿಷ್ಠಾಧಿಕಾರಿಗಳ ಸ್ವಷ್ಟನೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ಮಿತ್ತಬಾಗಿಲು:ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ರಕ್ಷಿತ್ ಶಿವರಾಂ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಮದು ಆದ ನಾಯಕನಾದರೆ, ಬೆಂಗಳೂರಿನಲ್ಲಿದ್ದ ಹರೀಶ್ ಪೂಂಜ ಬೆಳ್ತಂಗಡಿಗೆ ಆಮದು ಆಗಿ ಚುನಾವಣೆಗೆ ನಿಲ್ಲಲಿಲ್ಲವೇ: ಧರಣೇಂದ್ರ ಕುಮಾರ್

Suddi Udaya
error: Content is protected !!