July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

ನಡ: ಬೆಳ್ತಂಗಡಿ ತಾಲ್ಲೂಕು ಮಟ್ಟದ ಯೋಗ ಸ್ಪರ್ದೆ ಸರಕಾರಿ ಪ್ರೌಢಶಾಲೆ ನಡದಲ್ಲಿ ಆಯೋಜಿಸಲಾಗಿದ್ದು, ಇದರ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿರೂಪಾಕ್ಷಪ್ಪ ರವರು ನೆರವೇರಿಸಿದರು.

ಈ ಸ್ಪರ್ಧೆಯನ್ನು ಯೋಗಾಸನ ಮುದ್ರೆಯ ಪ್ರತಿಕೃತಿಯನ್ನು ಅನಾವರಣಗೊಳಿಸಿ ಹಾಗೂ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಯೋಗವು ನಮ್ಮ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತೀ ಅಗತ್ಯವೆಂದು ಹೇಳಿದರು. ನಡ ಗ್ರಾಮ ಪಂಚಾಯತಿನ ನಿರ್ಗಮನ ಅಧ್ಯಕ್ಷ ವಿಜಯ ಗೌಡ ಇವರು ಅಧ್ಯಕ್ಷತೆಯನ್ನು ವಹಿಸಿದ್ದು, ಭಾರತೀಯ ಪರಂಪರೆಯಾದ ಯೋಗವನ್ನು ಬದುಕಿನಲ್ಲಿ ಅಳವಡಿಸಿಕೊಂಡು, ದೇಶದ ಘನತೆಯನ್ನು ಹೆಚ್ಚಿಸುವವಲ್ಲಿ ಕಾಣಿಕೆ ನೀಡಲು ಕರೆ ನೀಡಿದರು.

ಸಮಾರಂಭದಲ್ಲಿ ಬೆಳ್ತಂಗಡಿ ತಾಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಎಸ್.ಡಿ.ಎಂ.ಸಿ.ಉಪಾಧ್ಯಕ್ಷರಾದ ಸುಧಾಕರ್, ಸದಸ್ಯರುಗಳಾದ ಲಕ್ಷ್ಮಣ ನಾಯ್ಕ, ಆನಂದ ಶೆಟ್ಟಿ ಉಪಸ್ಥಿತರಿದ್ದರು.

ಮುಖ್ಯಶಿಕ್ಷಕ ಯಾಕೂಬ್ ಎಸ್ ಸ್ವಾಗತಿಸಿ, ದೈಹಿಕ ಶಿಕ್ಚಣ ಶಿಕ್ಷಕಿ ಶ್ರೀಮತಿ ಸುಜಯ ಬಿ ಧನ್ಯವಾದವಿತ್ತರು. ಹಿಂದಿ ಶಿಕ್ಷಕ ಮೋಹನ ಬಾಬು ಕಾರ್ಯಕ್ರಮದ ನಿರೂಪಣೆಗೈದರು. ತಾಲೂಕಿನಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದಿಂದ ನೂರಕ್ಕೂ ಮಿಕ್ಕಿದ ಸ್ಪರ್ಧಾಳುಗಳು ಭಾಗವಹಿಸುತ್ತಿದ್ದಾರೆ.

Related posts

ಉಜಿರೆ ಎಸ್. ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಡಿ.ಶ್ರೇಯಸ್ ಕುಮಾರ್ ಭೇಟಿ

Suddi Udaya

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ಕರಾಟೆ ಪಂದ್ಯಾಟ: ದಿವ್ಯ ಜ್ಯೋತಿ ಆಂ.ಮಾ. ಶಾಲೆ ಕಾಯರ್ತಡ್ಕ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೆಂಪು ಕಲ್ಲು ಮತ್ತು ಮರಳು ಸಾಗಾಟಕ್ಕೆ ಕಠಿಣ ಕಾನೂನು : ಜನ ಪ್ರತಿನಿಧಿಗಳ ಮೌನವೇಕೆ ? : ಸಮಾಜ ಸೇವಕ ಡಾ. ರವಿ ಕಕ್ಕೆ ಪದವು

Suddi Udaya

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya
error: Content is protected !!