September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

ನಡ: ಬೆಳ್ತಂಗಡಿ ತಾಲ್ಲೂಕು ಮಟ್ಟದ ಯೋಗ ಸ್ಪರ್ದೆ ಸರಕಾರಿ ಪ್ರೌಢಶಾಲೆ ನಡದಲ್ಲಿ ಆಯೋಜಿಸಲಾಗಿದ್ದು, ಇದರ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿರೂಪಾಕ್ಷಪ್ಪ ರವರು ನೆರವೇರಿಸಿದರು.

ಈ ಸ್ಪರ್ಧೆಯನ್ನು ಯೋಗಾಸನ ಮುದ್ರೆಯ ಪ್ರತಿಕೃತಿಯನ್ನು ಅನಾವರಣಗೊಳಿಸಿ ಹಾಗೂ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಯೋಗವು ನಮ್ಮ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತೀ ಅಗತ್ಯವೆಂದು ಹೇಳಿದರು. ನಡ ಗ್ರಾಮ ಪಂಚಾಯತಿನ ನಿರ್ಗಮನ ಅಧ್ಯಕ್ಷ ವಿಜಯ ಗೌಡ ಇವರು ಅಧ್ಯಕ್ಷತೆಯನ್ನು ವಹಿಸಿದ್ದು, ಭಾರತೀಯ ಪರಂಪರೆಯಾದ ಯೋಗವನ್ನು ಬದುಕಿನಲ್ಲಿ ಅಳವಡಿಸಿಕೊಂಡು, ದೇಶದ ಘನತೆಯನ್ನು ಹೆಚ್ಚಿಸುವವಲ್ಲಿ ಕಾಣಿಕೆ ನೀಡಲು ಕರೆ ನೀಡಿದರು.

ಸಮಾರಂಭದಲ್ಲಿ ಬೆಳ್ತಂಗಡಿ ತಾಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಎಸ್.ಡಿ.ಎಂ.ಸಿ.ಉಪಾಧ್ಯಕ್ಷರಾದ ಸುಧಾಕರ್, ಸದಸ್ಯರುಗಳಾದ ಲಕ್ಷ್ಮಣ ನಾಯ್ಕ, ಆನಂದ ಶೆಟ್ಟಿ ಉಪಸ್ಥಿತರಿದ್ದರು.

ಮುಖ್ಯಶಿಕ್ಷಕ ಯಾಕೂಬ್ ಎಸ್ ಸ್ವಾಗತಿಸಿ, ದೈಹಿಕ ಶಿಕ್ಚಣ ಶಿಕ್ಷಕಿ ಶ್ರೀಮತಿ ಸುಜಯ ಬಿ ಧನ್ಯವಾದವಿತ್ತರು. ಹಿಂದಿ ಶಿಕ್ಷಕ ಮೋಹನ ಬಾಬು ಕಾರ್ಯಕ್ರಮದ ನಿರೂಪಣೆಗೈದರು. ತಾಲೂಕಿನಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದಿಂದ ನೂರಕ್ಕೂ ಮಿಕ್ಕಿದ ಸ್ಪರ್ಧಾಳುಗಳು ಭಾಗವಹಿಸುತ್ತಿದ್ದಾರೆ.

Related posts

ಅಕ್ರಮ ಮರಳು ಸಾಗಾಟ : ಪಿಕಾಪ್ ವಾಹನ ವಶಕ್ಕೆ

Suddi Udaya

ಅಪಘಾತದಲ್ಲಿ ಗಂಭೀರ ಗಾಯಗೊಂಡ ಮಂಚ ಗುರಿಪಳ್ಳ ಇವರಿಗೆ ವಾಟರ್ ಬೆಡ್ ಹಸ್ತಾಂತರ

Suddi Udaya

ಬೆಳ್ತಂಗಡಿ : ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ಬೆಳ್ತಂಗಡಿ: ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

Suddi Udaya

ಬಾರ್ಯ ಗ್ರಾ.ಪಂ. ಅಧ್ಯಕ್ಷರಾಗಿ ಉಸ್ಮಾನ್, ಉಪಾಧ್ಯಕ್ಷರಾಗಿ ಯಶೋಧ ಶೆಟ್ಟಿ ಆಯ್ಕೆ

Suddi Udaya
error: Content is protected !!