25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

ಬೆಳ್ತಂಗಡಿ:ಕಾಂಗ್ರೆಸ್ ಆಡಳಿತಕ್ಕೆ ಬಂದು ಮೂರು ತಿಂಗಳು ತುಂಬುವ ಮೊದಲೇ ಸಂವಿಧಾನ ವಿರೋಧಿ, ಪ್ರಜಾಪ್ರಭುತ್ವ ವಿರೋಧಿ,ಶಿಷ್ಟಾಚಾರ ವಿರೋಧಿ ನಡವಳಿಕೆಗೆ ಪರವಾನಿಗೆ ನೀಡುತ್ತಿದೆ ಎಂಬ ಭಾವನೆ ಜನ ಸಾಮಾನ್ಯರಲ್ಲಿ ವ್ಯಕ್ತವಾಗುತ್ತಿದೆ ಮಂತ್ರಿಗಳು ಅಧಿಕಾರಿಗಳನ್ನು ನಡೆಸುವ ರೀತಿ ನೀಡುವ ಬೆದರಿಕೆ ನ್ಯಾಯಯುತವಾಗಿ ಕೆಲಸ ಮಾಡಲು ಅವಕಾಶ ನೀಡದೆ ಭಯದಿಂದ ಕೆಲಸ ಮಾಡುವಂತಾಗಿದೆ ಎಂದು ಎಂಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿದರು. ಅವರು ಶುಕ್ರವಾರ ಬೆಳ್ತಂಗಡಿಯ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರು. ರಾಜ್ಯದ ಮಂತ್ರಿಗಳು ಸರ್ವಾಧಿಕಾರಿ ಧೋರಣೆಯಿಂದ ಕೆಲಸ ಮಾಡುತ್ತಿದ್ದು ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ. ಎಲ್ಲಾ ಕಡೆ ಪ್ರಗತಿ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದು ಅಧಿಕಾರಿಗಳ ವರ್ಗಾವಣೆ ಅಮಾನತು ಬೆದರಿಕೆ ಮೂಲಕ ಅವರಿಂದ ಕೆಲಸ ಮಾಡಿಸಲಾಗುತ್ತಿದೆ ಎಂದರು. ಮೂಡಬಿದ್ರೆಯಇರವೈಲಿನಲ್ಲಿ ರಾಜೀವ ಗಾಂಧಿ ಸೇವಾ ಕೇಂದ್ರ ಹಾಗೂ ನೂತನ ಪಂಚಾಯಿತಿ ಕಚೇರಿ ಕಟ್ಟಡದ ಉದ್ಘಾಟನೆ, ಬಂಟ್ವಾಳದ ಇರ್ವತ್ತೂರು ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛ ಸಂಕೀರ್ಣ ಘಟಕ ಲೋಕಾರ್ಪಣೆ ಕಾರ್ಯಕ್ರಮಗಳ ಆಮಂತ್ರಣಗಳನ್ನು ಮುದ್ರಿಸಿ, ಶಿಷ್ಟಾಚಾರ ಉಲ್ಲಂಘನೆ ಎಂಬ ವಿಚಾರದಲ್ಲಿ ಶಾಸಕರ ಗಮನಕ್ಕೆ ತರದೆ ಕಾರ್ಯಕ್ರಮಗಳನ್ನು ಮುಂದೂಡಲಾಗಿದ್ದು ಅಧಿಕಾರಿಗಳಿಗೆ ಅಮಾನತು ಶಿಕ್ಷೆ ನೀಡಲಾಗಿದೆ. ಅಮಾನತು ಶಿಕ್ಷೆ ಆ.14ರ ಒಳಗೆ ರದ್ದುಗೊಳಿಸದಿದ್ದಲ್ಲಿ,ದಕ ಜಿಲ್ಲೆಯ ಬಿಜೆಪಿ ಶಾಸಕರು ಡಿಸಿ ಕಚೇರಿ ಮುಂಭಾಗ ಧರಣಿ, ಪ್ರತಿಭಟನೆ ನಡೆಸಲಿದ್ದಾರೆ ಎಂದು ಹೇಳಿದರು.ವರ್ಗಾವಣೆ ದಂಧೆ ಎಲ್ಲ ಖಾತೆಯ ಸಚಿವರಿಂದ ನಡೆದಿರುವುದು ಜಗ ಜ್ಜಾಹೀರಾಗಿದೆ, ಗುತ್ತಿಗೆದಾರರಿಂದ ಕಮಿಷನ್ ಬಗ್ಗೆ ನೇರ ಆರೋಪ ವ್ಯಕ್ತವಾಗಿದೆ. ಸರಕಾರ ಅಧಿಕಾರಕ್ಕೆ ಬಂದ ಎರಡೇ ತಿಂಗಳಲ್ಲಿ ಭ್ರಷ್ಟಾಚಾರ ಮಿತಿಮೀರಿದೆ.ಶಾಸಕರ ಹುಕ್ಕು ಚ್ಯುತಿ ನಡೆಸುವ ಸರಕಾರಕೇಂದ್ರದ ಕಾಂಗ್ರೆಸ್ ಗೆ ಎ ಟಿ ಎಂ ಆಗಿದ್ದು,ಅಗತ್ಯ ಬಿಲ್ ಗಳನ್ನು ಪಾವತಿಸುತ್ತಿಲ್ಲ ಎಂದರು.ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯದರ್ಶಿ ಗಣೇಶ್ ಗೌಡ ನಾವೂರು ಉಪಸ್ಥಿತರಿದ್ದರು.

Related posts

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿ ಸಮಾರೋಪ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಅವ್ಯವಸ್ಥೆ ಪರಿಶೀಲಿಸಿದ ಎ.ಸಿ: ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲು ಗುತ್ತಿಗೆದಾರರಿಗೆ ಸೂಚನೆ

Suddi Udaya

ಅಳದಂಗಡಿ: ಬಡಗಕಾರಂದೂರು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಪುಂಜಾಲಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್, ಮಂಗಳೂರು, ಇದರ ನಡುವೆ ಒಡಂಬಡಿಕೆ ಒಪ್ಪಂದ

Suddi Udaya

ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ: ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಜಿಲ್ಲಾ ಕಾರಾಗೃಹದಲ್ಲಿ ಯೋಗ ಬೋಧನೆ

Suddi Udaya
error: Content is protected !!