ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

ಬೆಳ್ತಂಗಡಿ; ಇಲ್ಲಿನ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳ್ಳಿಹಬ್ಬ ವರ್ಷ ಆಚರಿಸಿಕೊಳ್ಳುತ್ತಿರುವ ಧರ್ಮಾಧ್ಯಕ್ಷ ಹಾಗೂ ಬೆಳ್ತಂಗಡಿ ತಾಲೂಕು ಸೌಹಾರ್ದ ವೇದಿಕೆ ಸಂಸ್ಥಾಪಕ ಅಧ್ಯಕ್ಷರು ಆಗಿರುವ ಬಿಷಪ್ ಲಾರೆನ್ಸ್ ಮುಕ್ಕುಝಿ ಅವರಿಗೆ ಆ.11 ರಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗೌರವಾಭಿನಂದನೆ ಸಲ್ಲಿಸಲಾಯಿತು.

ಅವರ ಅಧಿಕೃತ ನಿವಾಸಕ್ಕೆ ತೆರಳಿದ ಲಯನ್ಸ್ ಸದಸ್ಯರನ್ನು ಪರಿಚಯಿಸಿಕೊಂಡ ಬಿಷಪ್ ಅವರು ವಿಶೇಷ ಪ್ರಾರ್ಥನೆ ಮೂಲಕ ಆಶೀರ್ವದಿಸಿದರು. ಭೇಟಿ ಮಾಡಿದ ಎಲ್ಲರಿಗೂ ಸಿಹಿತಿಂಡಿ ನೀಡಿ ಪುರಸ್ಕರಿಸಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಕಾರ್ಯದರ್ಶಿ ಅನಂತಕೃಷ್ಣ, ಕೋಶಾಧಿಕಾರಿ ಸುಭಾಷಿಣಿ, ಲಯನ್ಸ್ ಸದಸ್ಯರುಗಳಾದ ಬಿ.ಪಿ ಅಶೋಕ್ ಕುಮಾರ್, ಧರಣೇಂದ್ರ ಕೆ ಜೈನ್, ಧತ್ತಾತ್ರೇಯ ಗೊಲ್ಲ, ವಿನ್ಸೆಂಟ್ ಟಿ ಡಿಸೋಜಾ ಉಪಸ್ಥಿತರಿದ್ದರು. ಅಶ್ರಫ್ ಆಲಿಕುಂಞಿ ಮುಂಡಾಜೆ ಕಾರ್ಯಕ್ರಮ ಸಂಯೋಜಿಸಿದರು.

Related posts

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮತದಾನದ ಜಾಗೃತಿ

Suddi Udaya

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ವತಿಯಿಂದ ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅರಸಿನಮಕ್ಕಿ: ಮನೆಗೆ ಅಕ್ರಮ ಪ್ರವೇಶ, ಅವಾಚ್ಯ ಶಬ್ದಗಳಿಂದ ಬೈದು , ಜೀವ ಬೆದರಿಕೆ: ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!