23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

ಬೆಳ್ತಂಗಡಿ; ಇಲ್ಲಿನ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳ್ಳಿಹಬ್ಬ ವರ್ಷ ಆಚರಿಸಿಕೊಳ್ಳುತ್ತಿರುವ ಧರ್ಮಾಧ್ಯಕ್ಷ ಹಾಗೂ ಬೆಳ್ತಂಗಡಿ ತಾಲೂಕು ಸೌಹಾರ್ದ ವೇದಿಕೆ ಸಂಸ್ಥಾಪಕ ಅಧ್ಯಕ್ಷರು ಆಗಿರುವ ಬಿಷಪ್ ಲಾರೆನ್ಸ್ ಮುಕ್ಕುಝಿ ಅವರಿಗೆ ಆ.11 ರಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗೌರವಾಭಿನಂದನೆ ಸಲ್ಲಿಸಲಾಯಿತು.

ಅವರ ಅಧಿಕೃತ ನಿವಾಸಕ್ಕೆ ತೆರಳಿದ ಲಯನ್ಸ್ ಸದಸ್ಯರನ್ನು ಪರಿಚಯಿಸಿಕೊಂಡ ಬಿಷಪ್ ಅವರು ವಿಶೇಷ ಪ್ರಾರ್ಥನೆ ಮೂಲಕ ಆಶೀರ್ವದಿಸಿದರು. ಭೇಟಿ ಮಾಡಿದ ಎಲ್ಲರಿಗೂ ಸಿಹಿತಿಂಡಿ ನೀಡಿ ಪುರಸ್ಕರಿಸಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಕಾರ್ಯದರ್ಶಿ ಅನಂತಕೃಷ್ಣ, ಕೋಶಾಧಿಕಾರಿ ಸುಭಾಷಿಣಿ, ಲಯನ್ಸ್ ಸದಸ್ಯರುಗಳಾದ ಬಿ.ಪಿ ಅಶೋಕ್ ಕುಮಾರ್, ಧರಣೇಂದ್ರ ಕೆ ಜೈನ್, ಧತ್ತಾತ್ರೇಯ ಗೊಲ್ಲ, ವಿನ್ಸೆಂಟ್ ಟಿ ಡಿಸೋಜಾ ಉಪಸ್ಥಿತರಿದ್ದರು. ಅಶ್ರಫ್ ಆಲಿಕುಂಞಿ ಮುಂಡಾಜೆ ಕಾರ್ಯಕ್ರಮ ಸಂಯೋಜಿಸಿದರು.

Related posts

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸೆ.22-ಅ.1: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ

Suddi Udaya

90ನೇ ವರ್ಷದ ಹುಟ್ಟುಹಬ್ಬ ಆಚರಿಸುತ್ತಿರುವ ಡಾ| ಮೋಹನ ದಾಸ್ ರವರಿಗೆ ಸೌತಡ್ಕ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ಲ್ಯಾಟ್, ಶೇ.10 ಡಿಸ್ಕೌಂಟ್ ಸೇಲ್

Suddi Udaya

ಎಲ್‌ಸಿಆರ್ ವಿದ್ಯಾ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!