July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

ಬೆಳ್ತಂಗಡಿ; ಇಲ್ಲಿನ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳ್ಳಿಹಬ್ಬ ವರ್ಷ ಆಚರಿಸಿಕೊಳ್ಳುತ್ತಿರುವ ಧರ್ಮಾಧ್ಯಕ್ಷ ಹಾಗೂ ಬೆಳ್ತಂಗಡಿ ತಾಲೂಕು ಸೌಹಾರ್ದ ವೇದಿಕೆ ಸಂಸ್ಥಾಪಕ ಅಧ್ಯಕ್ಷರು ಆಗಿರುವ ಬಿಷಪ್ ಲಾರೆನ್ಸ್ ಮುಕ್ಕುಝಿ ಅವರಿಗೆ ಆ.11 ರಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗೌರವಾಭಿನಂದನೆ ಸಲ್ಲಿಸಲಾಯಿತು.

ಅವರ ಅಧಿಕೃತ ನಿವಾಸಕ್ಕೆ ತೆರಳಿದ ಲಯನ್ಸ್ ಸದಸ್ಯರನ್ನು ಪರಿಚಯಿಸಿಕೊಂಡ ಬಿಷಪ್ ಅವರು ವಿಶೇಷ ಪ್ರಾರ್ಥನೆ ಮೂಲಕ ಆಶೀರ್ವದಿಸಿದರು. ಭೇಟಿ ಮಾಡಿದ ಎಲ್ಲರಿಗೂ ಸಿಹಿತಿಂಡಿ ನೀಡಿ ಪುರಸ್ಕರಿಸಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಕಾರ್ಯದರ್ಶಿ ಅನಂತಕೃಷ್ಣ, ಕೋಶಾಧಿಕಾರಿ ಸುಭಾಷಿಣಿ, ಲಯನ್ಸ್ ಸದಸ್ಯರುಗಳಾದ ಬಿ.ಪಿ ಅಶೋಕ್ ಕುಮಾರ್, ಧರಣೇಂದ್ರ ಕೆ ಜೈನ್, ಧತ್ತಾತ್ರೇಯ ಗೊಲ್ಲ, ವಿನ್ಸೆಂಟ್ ಟಿ ಡಿಸೋಜಾ ಉಪಸ್ಥಿತರಿದ್ದರು. ಅಶ್ರಫ್ ಆಲಿಕುಂಞಿ ಮುಂಡಾಜೆ ಕಾರ್ಯಕ್ರಮ ಸಂಯೋಜಿಸಿದರು.

Related posts

ನಾವೂರು ಬಡೆಕ್ಕಾವು ದೈವ ಕಂಬಳ ಮುಹೂರ್ತ

Suddi Udaya

ನಾರಾವಿ ಉ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ವೇಣೂರು: ಅಕ್ರಮವಾಗಿ ಸಾಗಿಸುತ್ತಿದ್ದ 125 ಕೆ‌ಜಿ ರಕ್ತ ಚಂದನ: ವಾಹನ ಸಮೇತ ರಕ್ತ ಚಂದನ ವಶಕ್ಕೆ ಪಡೆದ ವೇಣೂರು ಅರಣ್ಯಧಿಕಾರಿಗಳು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!