23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

ಬೆಳ್ತಂಗಡಿ; ಇಲ್ಲಿನ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳ್ಳಿಹಬ್ಬ ವರ್ಷ ಆಚರಿಸಿಕೊಳ್ಳುತ್ತಿರುವ ಧರ್ಮಾಧ್ಯಕ್ಷ ಹಾಗೂ ಬೆಳ್ತಂಗಡಿ ತಾಲೂಕು ಸೌಹಾರ್ದ ವೇದಿಕೆ ಸಂಸ್ಥಾಪಕ ಅಧ್ಯಕ್ಷರು ಆಗಿರುವ ಬಿಷಪ್ ಲಾರೆನ್ಸ್ ಮುಕ್ಕುಝಿ ಅವರಿಗೆ ಆ.11 ರಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗೌರವಾಭಿನಂದನೆ ಸಲ್ಲಿಸಲಾಯಿತು.

ಅವರ ಅಧಿಕೃತ ನಿವಾಸಕ್ಕೆ ತೆರಳಿದ ಲಯನ್ಸ್ ಸದಸ್ಯರನ್ನು ಪರಿಚಯಿಸಿಕೊಂಡ ಬಿಷಪ್ ಅವರು ವಿಶೇಷ ಪ್ರಾರ್ಥನೆ ಮೂಲಕ ಆಶೀರ್ವದಿಸಿದರು. ಭೇಟಿ ಮಾಡಿದ ಎಲ್ಲರಿಗೂ ಸಿಹಿತಿಂಡಿ ನೀಡಿ ಪುರಸ್ಕರಿಸಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಕಾರ್ಯದರ್ಶಿ ಅನಂತಕೃಷ್ಣ, ಕೋಶಾಧಿಕಾರಿ ಸುಭಾಷಿಣಿ, ಲಯನ್ಸ್ ಸದಸ್ಯರುಗಳಾದ ಬಿ.ಪಿ ಅಶೋಕ್ ಕುಮಾರ್, ಧರಣೇಂದ್ರ ಕೆ ಜೈನ್, ಧತ್ತಾತ್ರೇಯ ಗೊಲ್ಲ, ವಿನ್ಸೆಂಟ್ ಟಿ ಡಿಸೋಜಾ ಉಪಸ್ಥಿತರಿದ್ದರು. ಅಶ್ರಫ್ ಆಲಿಕುಂಞಿ ಮುಂಡಾಜೆ ಕಾರ್ಯಕ್ರಮ ಸಂಯೋಜಿಸಿದರು.

Related posts

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯ ಜಮಾಅತ್ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ : ಬೆದ್ರಬೆಟ್ಟು ಮರಿಯಾಂಬಿಕಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಠಾಣೆಯಲ್ಲಿ ಎರಡು ಪ್ರಕರಣ ದಾಖಲು ಹಿನ್ನೆಲೆ: ಶಾಸಕ ಹರೀಶ್ ಪೂಂಜರ‌ ಬಂಧನಕ್ಕೆ ಅವರ ಮನೆಗೆ ಬಂದ ಪೊಲೀಸರು

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!