29.1 C
ಪುತ್ತೂರು, ಬೆಳ್ತಂಗಡಿ
June 7, 2025
ಅಪರಾಧ ಸುದ್ದಿ

ಮದ್ದಡ್ಕದಲ್ಲಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿ :ಗಂಭೀರ ಗಾಯ

ಬೆಳ್ತಂಗಡಿ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಆ.10ರಂದು ಮದ್ದಡ್ಕದಲ್ಲಿ ನಡೆದಿದೆ.

ಕುವ್ವೆಟ್ಟು ಗ್ರಾಮದ ನಿವಾಸಿ ಶ್ರೀಮತಿ ಖಾತಿಜ (44ವ) ಎಂಬವರು ಆ. 10ರಂದು ರಾತ್ರಿ ಕುವೆಟ್ಟು ಗ್ರಾಮದ ಮದ್ದಡ್ಕ ನೇರಳಕಟ್ಟೆ ಎಂಬಲ್ಲಿ ತನ್ನ ಅಕ್ಕ ಮೈಮುನ (55ವ)ರೊಂದಿಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕೆಎ21ಎಕ್ಸ್‌4155ನೇ ದ್ವಿಚಕ್ರ ವಾಹನವನ್ನು ಅದರ ಸವಾರ ಖಾಲಿದ್‌ ರವರು ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು ಹಿಂದಿನಿಂದ ಇಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಖಾತಿಜ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 84/2023 ಕಲಂ: 279,337 ಭಾ ದಂ ಸಂ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!