23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಮದ್ದಡ್ಕದಲ್ಲಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿ :ಗಂಭೀರ ಗಾಯ

ಬೆಳ್ತಂಗಡಿ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಬ್ಬರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಆ.10ರಂದು ಮದ್ದಡ್ಕದಲ್ಲಿ ನಡೆದಿದೆ.

ಕುವ್ವೆಟ್ಟು ಗ್ರಾಮದ ನಿವಾಸಿ ಶ್ರೀಮತಿ ಖಾತಿಜ (44ವ) ಎಂಬವರು ಆ. 10ರಂದು ರಾತ್ರಿ ಕುವೆಟ್ಟು ಗ್ರಾಮದ ಮದ್ದಡ್ಕ ನೇರಳಕಟ್ಟೆ ಎಂಬಲ್ಲಿ ತನ್ನ ಅಕ್ಕ ಮೈಮುನ (55ವ)ರೊಂದಿಗೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕೆಎ21ಎಕ್ಸ್‌4155ನೇ ದ್ವಿಚಕ್ರ ವಾಹನವನ್ನು ಅದರ ಸವಾರ ಖಾಲಿದ್‌ ರವರು ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು ಹಿಂದಿನಿಂದ ಇಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಖಾತಿಜ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 84/2023 ಕಲಂ: 279,337 ಭಾ ದಂ ಸಂ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

Suddi Udaya

ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಚೆಕ್ ಬೌನ್ಸ್ ಪ್ರಕರಣ: ನ್ಯಾಯಾಲಯಕ್ಕೆ ಐದು ವರ್ಷ ಹಾಜರಾಗದ ಆರೋಪಿಯ ಬಂಧನ

Suddi Udaya
error: Content is protected !!