24.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

ಮಡಂತ್ಯಾರು: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ನಾಗರಾಜ ಮರಕಡ ರವರು ಬಳ್ಳಮಂಜದಿಂದ ಮಡಂತ್ಯಾರು ಕಡೆಗೆ ಬಾಡಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆಟೋದಲ್ಲಿದ್ದ ಪ್ರಯಾಣಿಕರು ಬ್ಯಾಗ್ ನ್ನು ಮರೆತು ಬಿಟ್ಟು ಹೋಗಿದ್ದು ಅದನ್ನು ವಾಪಸ್ಸು ಪ್ರಾಯಾಣಿಕರಿಗೆ ತಲುಪಿಸುವಲ್ಲಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಆಟೋ ಚಾಲಕ ನಾಗರಾಜ್ ಮರಕಡ ರವರು ಮರೆತು ಬಿಟ್ಟು ಹೋಗಿದ್ದ ಬ್ಯಾಗ್ ನ್ನು ಕಂಡು ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ ಇವರಿಗೆ ಕರೆ ಮಾಡಿ ತಿಳಿಸಿದರು. ಎಲ್ಲಾ ವಾಟ್ಸಾಪ್ ಮೊಬೈಲ್ ಸಂದೇಶದಲ್ಲಿ ಬರೆದು ಗ್ರೂಪುಗಳಿಗೆ ಕಳುಹಿಸಲಾಯಿತು.

ನಂತರ ಆ ಬ್ಯಾಗಿನಲ್ಲಿ ಇದ್ದ ಸರ್ಕಾರಿ ಆಸ್ಪತ್ರೆ ಮಚ್ಚಿನ ಇಲ್ಲಿಯ ಮದ್ದಿನ ಚೀಟಿ ಕಂಡು ಆ ಚೀಟಿ ನ ಮೂಲಕ ಅಲ್ಲಿನ ಸಿಸ್ಟರ್ ಅನ್ನು ಫೋನ್ ಮೂಲಕ ಸಂಪರ್ಕಿಸಿ. ವಾರಸುದಾರರ ಸುನೀತ ಕಜೆ ಪಾಲೇದ್ ಇವರ ನಂಬರ್ ಪಡೆದು ಸಂಪರ್ಕಿಸಿ ಅವರಿಗೆ ವಿತರಿಸಲಾಯಿತು.

ಆಟೋ ಚಾಲಕ ನಾಗರಾಜ್ ಮರಕಡ ರವರಿಗೆ ಆಟೋ ಚಾಲಕರು ಮಾಲಕರ ಸಂಘ ಮಡಂತ್ಯಾರು ವಲಯ ಇವರ ಪ್ರಾಮಾಣಿಕತೆಗೆ ಅಭಿನಂದನೆಯನ್ನು ಸಲ್ಲಿಸಿದರು.

Related posts

ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ

Suddi Udaya

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
error: Content is protected !!