23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

ಮಡಂತ್ಯಾರು: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ನಾಗರಾಜ ಮರಕಡ ರವರು ಬಳ್ಳಮಂಜದಿಂದ ಮಡಂತ್ಯಾರು ಕಡೆಗೆ ಬಾಡಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆಟೋದಲ್ಲಿದ್ದ ಪ್ರಯಾಣಿಕರು ಬ್ಯಾಗ್ ನ್ನು ಮರೆತು ಬಿಟ್ಟು ಹೋಗಿದ್ದು ಅದನ್ನು ವಾಪಸ್ಸು ಪ್ರಾಯಾಣಿಕರಿಗೆ ತಲುಪಿಸುವಲ್ಲಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಆಟೋ ಚಾಲಕ ನಾಗರಾಜ್ ಮರಕಡ ರವರು ಮರೆತು ಬಿಟ್ಟು ಹೋಗಿದ್ದ ಬ್ಯಾಗ್ ನ್ನು ಕಂಡು ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ ಇವರಿಗೆ ಕರೆ ಮಾಡಿ ತಿಳಿಸಿದರು. ಎಲ್ಲಾ ವಾಟ್ಸಾಪ್ ಮೊಬೈಲ್ ಸಂದೇಶದಲ್ಲಿ ಬರೆದು ಗ್ರೂಪುಗಳಿಗೆ ಕಳುಹಿಸಲಾಯಿತು.

ನಂತರ ಆ ಬ್ಯಾಗಿನಲ್ಲಿ ಇದ್ದ ಸರ್ಕಾರಿ ಆಸ್ಪತ್ರೆ ಮಚ್ಚಿನ ಇಲ್ಲಿಯ ಮದ್ದಿನ ಚೀಟಿ ಕಂಡು ಆ ಚೀಟಿ ನ ಮೂಲಕ ಅಲ್ಲಿನ ಸಿಸ್ಟರ್ ಅನ್ನು ಫೋನ್ ಮೂಲಕ ಸಂಪರ್ಕಿಸಿ. ವಾರಸುದಾರರ ಸುನೀತ ಕಜೆ ಪಾಲೇದ್ ಇವರ ನಂಬರ್ ಪಡೆದು ಸಂಪರ್ಕಿಸಿ ಅವರಿಗೆ ವಿತರಿಸಲಾಯಿತು.

ಆಟೋ ಚಾಲಕ ನಾಗರಾಜ್ ಮರಕಡ ರವರಿಗೆ ಆಟೋ ಚಾಲಕರು ಮಾಲಕರ ಸಂಘ ಮಡಂತ್ಯಾರು ವಲಯ ಇವರ ಪ್ರಾಮಾಣಿಕತೆಗೆ ಅಭಿನಂದನೆಯನ್ನು ಸಲ್ಲಿಸಿದರು.

Related posts

ಕಪಿಲ ಕೇಸರಿ ಯುವಕ ಮಂಡಲದ ವತಿಯಿಂದ ಧನ ಸಂಗ್ರಹ, ಹಸ್ತಾಂತರ

Suddi Udaya

ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಪಟ್ಟಾಭಿಷೇಕದ ಅಂಗವಾಗಿ ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್‌ಕಾಲೇಜಿನಲ್ಲಿ ಸರಣಿ ಕಾರ್ಯಕ್ರಮಗಳು

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!