22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

ಮಡಂತ್ಯಾರು: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ನಾಗರಾಜ ಮರಕಡ ರವರು ಬಳ್ಳಮಂಜದಿಂದ ಮಡಂತ್ಯಾರು ಕಡೆಗೆ ಬಾಡಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆಟೋದಲ್ಲಿದ್ದ ಪ್ರಯಾಣಿಕರು ಬ್ಯಾಗ್ ನ್ನು ಮರೆತು ಬಿಟ್ಟು ಹೋಗಿದ್ದು ಅದನ್ನು ವಾಪಸ್ಸು ಪ್ರಾಯಾಣಿಕರಿಗೆ ತಲುಪಿಸುವಲ್ಲಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಆಟೋ ಚಾಲಕ ನಾಗರಾಜ್ ಮರಕಡ ರವರು ಮರೆತು ಬಿಟ್ಟು ಹೋಗಿದ್ದ ಬ್ಯಾಗ್ ನ್ನು ಕಂಡು ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ ಇವರಿಗೆ ಕರೆ ಮಾಡಿ ತಿಳಿಸಿದರು. ಎಲ್ಲಾ ವಾಟ್ಸಾಪ್ ಮೊಬೈಲ್ ಸಂದೇಶದಲ್ಲಿ ಬರೆದು ಗ್ರೂಪುಗಳಿಗೆ ಕಳುಹಿಸಲಾಯಿತು.

ನಂತರ ಆ ಬ್ಯಾಗಿನಲ್ಲಿ ಇದ್ದ ಸರ್ಕಾರಿ ಆಸ್ಪತ್ರೆ ಮಚ್ಚಿನ ಇಲ್ಲಿಯ ಮದ್ದಿನ ಚೀಟಿ ಕಂಡು ಆ ಚೀಟಿ ನ ಮೂಲಕ ಅಲ್ಲಿನ ಸಿಸ್ಟರ್ ಅನ್ನು ಫೋನ್ ಮೂಲಕ ಸಂಪರ್ಕಿಸಿ. ವಾರಸುದಾರರ ಸುನೀತ ಕಜೆ ಪಾಲೇದ್ ಇವರ ನಂಬರ್ ಪಡೆದು ಸಂಪರ್ಕಿಸಿ ಅವರಿಗೆ ವಿತರಿಸಲಾಯಿತು.

ಆಟೋ ಚಾಲಕ ನಾಗರಾಜ್ ಮರಕಡ ರವರಿಗೆ ಆಟೋ ಚಾಲಕರು ಮಾಲಕರ ಸಂಘ ಮಡಂತ್ಯಾರು ವಲಯ ಇವರ ಪ್ರಾಮಾಣಿಕತೆಗೆ ಅಭಿನಂದನೆಯನ್ನು ಸಲ್ಲಿಸಿದರು.

Related posts

ಜ.6 : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ವಂದೇ ಮಾತರಂ’ ನನ್ನ ಸೇವೆ ದೇಶಕ್ಕಾಗಿ.. ನೇತ್ರಾವತಿ ನದಿ ಸ್ವಚ್ಛತಾ ಕಾರ್ಯಕ್ರಮ ಆರಂಭ : ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಸೇರಿದಂತೆ ಹಲವು ಸಂಘಟನೆಗಳ ಸಾಥ್

Suddi Udaya

ಗುರುವಾಯನಕೆರೆ ಶಕ್ತಿನಗರ ಬಳಿ ಅಪಘಾತ- ಬೈಕ್‌ ಸವಾರನಿಗೆ ಗಾಯ

Suddi Udaya

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಸಂಗೀತ ಜೂನಿಯರ್ ಪರೀಕ್ಷೆ: ಬೆಳ್ತಂಗಡಿ ಎಸ್. ಡಿ. ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಪ್ರಾಪ್ತಿ ವಿ. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಅ.11: ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಂದ ಚಾಲನೆ

Suddi Udaya
error: Content is protected !!