23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

ಮಡಂತ್ಯಾರು: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ನಾಗರಾಜ ಮರಕಡ ರವರು ಬಳ್ಳಮಂಜದಿಂದ ಮಡಂತ್ಯಾರು ಕಡೆಗೆ ಬಾಡಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆಟೋದಲ್ಲಿದ್ದ ಪ್ರಯಾಣಿಕರು ಬ್ಯಾಗ್ ನ್ನು ಮರೆತು ಬಿಟ್ಟು ಹೋಗಿದ್ದು ಅದನ್ನು ವಾಪಸ್ಸು ಪ್ರಾಯಾಣಿಕರಿಗೆ ತಲುಪಿಸುವಲ್ಲಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಆಟೋ ಚಾಲಕ ನಾಗರಾಜ್ ಮರಕಡ ರವರು ಮರೆತು ಬಿಟ್ಟು ಹೋಗಿದ್ದ ಬ್ಯಾಗ್ ನ್ನು ಕಂಡು ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ ಇವರಿಗೆ ಕರೆ ಮಾಡಿ ತಿಳಿಸಿದರು. ಎಲ್ಲಾ ವಾಟ್ಸಾಪ್ ಮೊಬೈಲ್ ಸಂದೇಶದಲ್ಲಿ ಬರೆದು ಗ್ರೂಪುಗಳಿಗೆ ಕಳುಹಿಸಲಾಯಿತು.

ನಂತರ ಆ ಬ್ಯಾಗಿನಲ್ಲಿ ಇದ್ದ ಸರ್ಕಾರಿ ಆಸ್ಪತ್ರೆ ಮಚ್ಚಿನ ಇಲ್ಲಿಯ ಮದ್ದಿನ ಚೀಟಿ ಕಂಡು ಆ ಚೀಟಿ ನ ಮೂಲಕ ಅಲ್ಲಿನ ಸಿಸ್ಟರ್ ಅನ್ನು ಫೋನ್ ಮೂಲಕ ಸಂಪರ್ಕಿಸಿ. ವಾರಸುದಾರರ ಸುನೀತ ಕಜೆ ಪಾಲೇದ್ ಇವರ ನಂಬರ್ ಪಡೆದು ಸಂಪರ್ಕಿಸಿ ಅವರಿಗೆ ವಿತರಿಸಲಾಯಿತು.

ಆಟೋ ಚಾಲಕ ನಾಗರಾಜ್ ಮರಕಡ ರವರಿಗೆ ಆಟೋ ಚಾಲಕರು ಮಾಲಕರ ಸಂಘ ಮಡಂತ್ಯಾರು ವಲಯ ಇವರ ಪ್ರಾಮಾಣಿಕತೆಗೆ ಅಭಿನಂದನೆಯನ್ನು ಸಲ್ಲಿಸಿದರು.

Related posts

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ 2023-24 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಧರ್ಮಸ್ಥಳ: ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಅಗ್ನಿಶಾಮಕ ವಾಹನ ಕೊಡುಗೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

Suddi Udaya

ಲಾಯಿಲ ಪ್ರಸನ್ನ ಫಾರ್ಮಸಿ ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಹೊಂಬೆಳಕು ಕಾರ್ಯಕ್ರಮದಲ್ಲಿ ಉಜಿರೆ ಪಂ.ಅ.ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ ರವರಿಗೆ ಸನ್ಮಾನ

Suddi Udaya
error: Content is protected !!