July 23, 2026
ಅಪರಾಧ ಸುದ್ದಿ

ಹಾಡು ಹಗಲೇ ಲಾಯಿಲದ ದೇಜಪ್ಪರ ಮನೆಗೆ ನುಗ್ಗಿದ ಕಳ್ಳರು: ರೂ.20 ಸಾವಿರ ನಗದು ಸಹಿತ ರೂ.40 ಸಾವಿರ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ : ಹಾಡು ಹಗಲೇ
ಲಾಯಿಲ ಗ್ರಾಮದ ನಿವಾಸಿ ದೇಜಪ್ಪ ಎಂಬವರ ಮನೆಗೆ ನುಗ್ಗಿದ ಕಳ್ಳರು ರೂ.20 ಸಾವಿರ ನಗದು ಸಹಿತ ಚಿನ್ನಾಭರಣ ಕಳವುಗೈದ ಘಟನೆ ಆ.10ರಂದು ವರದಿಯಾಗಿದೆ.
ಆ.10 ರಂದು ಬೆಳಿಗ್ಗೆ 8.30 ರಿಂದ ಸಂಜೆ 5.30ರ ಅವಧಿಯಲ್ಲಿ ದೇಜಪ್ಪರ ಮನೆಯಲ್ಲಿ ಯಾರು ಇಲ್ಲದ ವೇಳೆ ಯಾರೋ ಕಳ್ಳರು ಮನೆಯ ಬಲಬದಿ ಇರುವ ಸ್ಟೋರ್ ರೂಂ ನಿಂದ ಮರದ ಕಿಟಕಿಯನ್ನು ಯಾವುದೋ ಆಯುಧದಿಂದ ಮುರಿದು ಗೋಡ್ರೇಜ್ ನ ಬೀಗವನ್ನು ಅಲ್ಲಿಯೇ ಇಟ್ಟಿದ್ದ ಕೀಯಿಂದ ಲಾಕ್ ತೆಗೆದು ಗೊಡ್ರೇಜಿನಲ್ಲಿ ಇಟ್ಟಿರುವ ಸುಮಾರು ರೂ.20 ಸಾವಿರ ನಗದು ಮತ್ತು ಸುಮಾರು 8 ಗ್ರಾಂ ತೂಕದ ಚಿನ್ನಾಭರಣ ಅಂದಾಜು ಮೌಲ್ಯ ಸುಮಾರು 40ಸಾವಿರ ವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುವುದಾಗಿ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದೆ.
. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 73/2023 ಕಲಂ;454,380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಆರೋಪಿ ಕೇಶವ ಪೂಜಾರಿಗೆ ಶಿಕ್ಷೆ ಪ್ರಕಟ

Suddi Udaya

ಅತ್ತೆ ಮೇಲೆ ಕತ್ತಿಯಿಂದ ಕಡಿದು ಕೊಲೆ ಯತ್ನ: ಆರೋಪಿ ಅಳಿಯನ ಬಂಧನ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya

ನಿವೃತ್ತ ಯೋಧ ದಿನೇಶ್ ಮೂಲ್ಯಹೃದಯಾಘಾತದಿಂದ ನಿಧನ

Suddi Udaya
error: Content is protected !!