25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

ಬೆಳ್ತಂಗಡಿ: ತಾಲೂಕಿನ ಹೊಸಂಗಡಿಯಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ ‘ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ ಆ.10ರಂದು ನೆರವೇರಿತು.


ಕಾರ್ಯಕ್ರಮವನ್ನು ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಪಟ್ಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಂಸ್ಕೃತಿಯನ್ನು ಉಳಿಸಲು ಯಕ್ಷಗಾನವು ಪೂರಕ ಹಾಗೂ ಪ್ರೇರಕ ಶಕ್ತಿಯಾಗಿದೆ. ಮಕ್ಕಳ ಮೇಳಗಳನ್ನು ಸಮಾಜವು ಗುರುತಿಸುವ ಕಾರ್ಯವನ್ನು ಮಾಡಿ ಯಕ್ಷಗಾನವನ್ನು ಉಳಿಸಿ ಬೆಳೆಸಬೇಕಿದೆ ಎಂದರು.


ಶ್ರೀ ವಾಸುದೇವ ಐತಾಳ್, ಸಂಚಾಲಕರು ಯಕ್ಷ ಶಿಕ್ಷಣದ ಸಂಚಾಲಕರು ಪ್ರಾಸ್ತಾವಿಕ ಭಾಷಣ ಮಾಡಿದರು.
ಗೌರವ ಅತಿಥಿಗಳಾಗಿ ಯುವ ಪ್ರತಿಭೆ ಅಕ್ಷಯ್ ಭಟ್ ಮತ್ತು ಜೀವಿತ್ ಪೆರಾಡಿ ಉಪಸ್ಥಿತರಿದ್ದರು.
ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಧರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು, ವಿದ್ಯಾರ್ಥಿಗಳಿಗೆ ಇದೊಂದು ಸದಾವಕಾಶವಾಗಿದೆ ಎಂದರು.


ಶಿಕ್ಷಕಿರಾದ ಸುನಿತಾ ಸ್ವಾಗತಿಸಿದರು. ನಯನಾ ವಂದಿಸಿದರು. ವಿದ್ಯಾಲತಾ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

Suddi Udaya

ಇಂದಬೆಟ್ಟು : ಕಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಅಯೋಧ್ಯೆಯಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya
error: Content is protected !!