32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ; ಪರಿಶೀಲನೆ

ಬೆಳ್ತಂಗಡಿ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕ್ಲಪ್ತ ಸಮಯದಲ್ಲಿ ಚಿಕಿತ್ಸೆ ಲಭಿಸದೆ ಕಳೆದೆರಡು ದಿನಗಳ ಹಿಂದೆ ಹಸುಗೂಸು ಸಾವನ್ನಪ್ಪಿದೆ ಎಂಬ ಆರೋಪದ ವಿಚಾರಣೆಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಕಿಶೋರ್ ಕುಮಾರ್ ಅವರು ಆ.10 ರಂದು ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೃತ ಮಗುವಿನ ಕುಟುಂಬಸ್ಥರಿಂದ ಮಾಹಿತಿ ಪಡೆದುಕೊಂಡ ಜಿಲ್ಲಾ ಆರೋಗ್ಯಾಧಿಕಾರಿಯವರು ಆಯ್ಕೆಯಲ್ಲಿರುವ ಮಗು ದಾಖಲಾದ ಬಗೆಗಿನ ದಾಖಲೆಗಳನ್ನು ಪರಿಶೀಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಮಗುವಿನ ವಿಳಂಬವಾದ ಬಗ್ಗೆ ಅವರು ಹೇಳಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಮನೆಯವರ ಹೇಳಿಕೆ ಹಾಗೂ ಆಸ್ಪತ್ರೆಯ ದಾಖಲೆಗಳನ್ನು ಪರಿಶೀಲಿಸುತ್ತೇವೆ. ಯಾವುದಾದರೂ ರೀತಿಯಲ್ಲಿ ವಿಳಂಬವಾಗಿರುವುದು ಕಂಡು ಬಂದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಆಸ್ಪತ್ರೆಯ ಮಕ್ಕಳ ತಜ್ಞರು ಎರಡು ಬಾರಿ ಬಂದು ಮಗುವನ್ನು ಪರೀಕ್ಷಿಸಿದ್ದಾರೆ ಎಂದು ತಿಳಿಸಿದ ಅವರು ನ್ಯುಮೋನಿಯಾದೊಂದಿಗೆ ಮಗು ಬಂದಿದೆ. ಅಗತ್ಯ ಚಿಕಿತ್ಸೆ ನೀಡಿದ್ದಾರೆ. ಆದರೆ ಮಗು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ ಎಂಬ ಮಾಹಿತಿ ಇದೆ ಎಂದರು.

ಸರಕಾರಿ ಆಸ್ಪತ್ರೆಯ ವೈದ್ಯರು ಖಾಸಗಿ ಕ್ಲಿನಿಕ್ ನಡೆಸಿಕೊಂಡು ಆಸ್ಪತ್ರೆಯಲ್ಲಿ ಬರುವ ರೋಗಿಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದು, ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ ಎಂಬ ಸಾರ್ವಜನಿಕರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಪರಿಶೀಲಿಸಲಾಗುವುದು ಎಂದರು.

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರು ಆಸ್ಪತ್ರೆಗೆ ಭೇಟಿ ನೀಡಿ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಮಗುವಿನ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು.

Related posts

ಮತ್ಸ್ಯ ತೀರ್ಥ ಶಿಶಿಲ ದೇವಸ್ಥಾನಕ್ಕೆ ಹೆಗ್ಗಡೆ ದಂಪತಿ ಭೇಟಿ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಫಿಟ್ ಫೆಸ್ಟ್ : ವಾರ್ಷಿಕ ಕ್ರೀಡಾಕೂಟ :

Suddi Udaya

ಬೆಳ್ತಂಗಡಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತ ಸ್ಮರಣೆ

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya
error: Content is protected !!