22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ; ಪರಿಶೀಲನೆ

ಬೆಳ್ತಂಗಡಿ: ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕ್ಲಪ್ತ ಸಮಯದಲ್ಲಿ ಚಿಕಿತ್ಸೆ ಲಭಿಸದೆ ಕಳೆದೆರಡು ದಿನಗಳ ಹಿಂದೆ ಹಸುಗೂಸು ಸಾವನ್ನಪ್ಪಿದೆ ಎಂಬ ಆರೋಪದ ವಿಚಾರಣೆಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಕಿಶೋರ್ ಕುಮಾರ್ ಅವರು ಆ.10 ರಂದು ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೃತ ಮಗುವಿನ ಕುಟುಂಬಸ್ಥರಿಂದ ಮಾಹಿತಿ ಪಡೆದುಕೊಂಡ ಜಿಲ್ಲಾ ಆರೋಗ್ಯಾಧಿಕಾರಿಯವರು ಆಯ್ಕೆಯಲ್ಲಿರುವ ಮಗು ದಾಖಲಾದ ಬಗೆಗಿನ ದಾಖಲೆಗಳನ್ನು ಪರಿಶೀಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಮಗುವಿನ ವಿಳಂಬವಾದ ಬಗ್ಗೆ ಅವರು ಹೇಳಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಮನೆಯವರ ಹೇಳಿಕೆ ಹಾಗೂ ಆಸ್ಪತ್ರೆಯ ದಾಖಲೆಗಳನ್ನು ಪರಿಶೀಲಿಸುತ್ತೇವೆ. ಯಾವುದಾದರೂ ರೀತಿಯಲ್ಲಿ ವಿಳಂಬವಾಗಿರುವುದು ಕಂಡು ಬಂದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಆಸ್ಪತ್ರೆಯ ಮಕ್ಕಳ ತಜ್ಞರು ಎರಡು ಬಾರಿ ಬಂದು ಮಗುವನ್ನು ಪರೀಕ್ಷಿಸಿದ್ದಾರೆ ಎಂದು ತಿಳಿಸಿದ ಅವರು ನ್ಯುಮೋನಿಯಾದೊಂದಿಗೆ ಮಗು ಬಂದಿದೆ. ಅಗತ್ಯ ಚಿಕಿತ್ಸೆ ನೀಡಿದ್ದಾರೆ. ಆದರೆ ಮಗು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ ಎಂಬ ಮಾಹಿತಿ ಇದೆ ಎಂದರು.

ಸರಕಾರಿ ಆಸ್ಪತ್ರೆಯ ವೈದ್ಯರು ಖಾಸಗಿ ಕ್ಲಿನಿಕ್ ನಡೆಸಿಕೊಂಡು ಆಸ್ಪತ್ರೆಯಲ್ಲಿ ಬರುವ ರೋಗಿಗಳ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದು, ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ ಎಂಬ ಸಾರ್ವಜನಿಕರ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಪರಿಶೀಲಿಸಲಾಗುವುದು ಎಂದರು.

ಮಾಜಿ ಶಾಸಕ ಕೆ.ವಸಂತ ಬಂಗೇರ ಅವರು ಆಸ್ಪತ್ರೆಗೆ ಭೇಟಿ ನೀಡಿ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಮಗುವಿನ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದರು.

Related posts

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

Suddi Udaya

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

7ನೇ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ತುಳುವಿನ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ “ಪುರ್ಸ ಕಟ್ಟುನೆ: ಇನಿ-ಕೋಡೆ- ಎಲ್ಲೆ” ಆಯ್ಕೆ

Suddi Udaya

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಮುಂಡಾಜೆ ಕಾಲೇಜು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!