22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಅನುಚಿತ ವರ್ತನೆ, ಹಲ್ಲೆ ಆರೋಪ: ಕೊಕ್ಕಡ ಹಾಗೂ ನೆಲ್ಯಾಡಿ ಮಹಿಳೆಯರಿಂದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಕೊಕ್ಕಡ: ಅನುಚಿತವಾಗಿ ವರ್ತಿಸಿದ ಪತಿಯ ಸ್ನೇಹಿತನ ವಿಚಾರಣೆಗೆ ಆತನ ಮನೆಗೆ ಪತಿಯ ಜೊತೆ ತೆರಳಿದ್ದ ವೇಳೆ ತಲವಾರು ತೋರಿಸಿ ಜೀವಬೆದರಿಕೆಯೊಡ್ಡಿ, ವಸ್ತ್ರವನ್ನು ಹರಿದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನೆಲ್ಯಾಡಿಯ ಮಹಿಳೆಯೋರ್ವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಕ್ಕಡದ ಮಹಿಳೆಯೋರ್ವರು ಧರ್ಮಸ್ಥಳ ಠಾಣೆಗೆ ಪ್ರತಿ ದೂರು ನೀಡಿದ್ದು ಮನೆಗೆ ಅಕ್ರಮ ಪ್ರವೇಶಿಸಿ ಅವಾಚ್ಯವಾಗಿ ಬೈದು, ಅನುಚಿತವಾಗಿ ವರ್ತಿಸಿ ಪತಿಗೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.


ಕೊಣಾಲು ನಿವಾಸಿಯಾಗಿದ್ದು ಪ್ರಸ್ತುತ ನೆಲ್ಯಾಡಿಯಲ್ಲಿ ವಾಸವಿರುವ ಜೀವನ್ ಎಂಬವರ ಪತ್ನಿ ಡೆಲಿಶಾ ಡೆಸಾ (23ವ.) ಹಾಗೂ ಕೊಕ್ಕಡ ಹಾರಮನೆ ನಿವಾಸಿ ಲಕ್ಷ್ಮೀನಾರಾಯಣ ಎಂಬವರ ಪತ್ನಿ ಡಾಲಿ ದೂರು ನೀಡಿದವರಾಗಿದ್ದಾರೆ.

ಡೆಲಿಶಾ ಡೆಸಾ ಅವರು ನೀಡಿದ ದೂರಿನಲ್ಲಿ ನಾನು ಪ್ರತೀ ದಿನ ನೆಲ್ಯಾಡಿಯಿಂದ ಮಂಗಳೂರಿಗೆ ಕೆಲಸಕ್ಕೆ ಹೋಗಿ ಬರುತ್ತಿದ್ದು ಕೆಲ ದಿನದ ಹಿಂದೆ ಕೆಲಸ ಮುಗಿಸಿ ಮನೆಗೆ ಹೋಗುವರೇ ನೆಲ್ಯಾಡಿಯಲ್ಲಿರುವ ವೇಳೆ ಪತಿಯ ಸ್ನೇಹಿತ ಲಕ್ಷ್ಮೀನಾರಾಯಣ ಎಂಬವರು ಅನುಚಿತವಾಗಿ ವರ್ತಿಸಿ, ಅಸಭ್ಯವಾಗಿ ಮಾತನಾಡುತ್ತಿದ್ದರು.


ಈ ಬಗ್ಗೆ ಗಂಡನ ಬಳಿ ತಿಳಿಸಿ, ನಾನು, ಪತಿ ಜೀವನ್ ಹಾಗೂ ಕಾರಿನಲ್ಲಿ ಚಾಲಕರಾಗಿ ಸುರೇಶ್ ಎಂಬವರನ್ನು ಕರೆದುಕೊಂಡು ಲಕ್ಷ್ಮಿನಾರಾಯಣ ಅವರ ಮನೆಗೆ ತೆರಳಿ ವಿಚಾರಿಸಿದಾಗ ಅವರು ತಲವಾರು ತೋರಿಸಿ ಕೊಲ್ಲುವುದಾಗಿ ಜೀವಬೆದರಿಕೆ ಒಡ್ಡಿದ್ದಾರೆ. ಅಲ್ಲದೇ ವಸ್ತ್ರವನ್ನು ಹರಿದು ನನಗೆ ಹಾಗೂ ಪತಿಗೆ ದೊಣ್ಣೆ ಮತ್ತು ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಡೆಲಿಶಾ ಡೆಸಾ ಹಾಗೂ ಅವರ ಪತಿ ಜೀವನ್ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ. ಡೆಸಾ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ: 354(A)506(2) 323, 324 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

ಪ್ರತಿದೂರು: ಇದೇ ಪ್ರಕರಣಕ್ಕೆ ಸಂಬಂಧಿಸಿ ಕೊಕ್ಕಡ ಹಾರಮನೆ ನಿವಾಸಿ ಲಕ್ಷ್ಮೀನಾರಾಯಣ ಎಂಬವರ ಪತ್ನಿ ಡಾಲಿ ಎಂಬವರು ಧರ್ಮಸ್ಥಳ ಪೊಲೀಸರಿಗೆ ಪ್ರತಿದೂರು ನೀಡಿದ್ದಾರೆ. ಆ.7ರಂದು ಸಂಜೆ ನಾನು ಹಾಗೂ ಗಂಡ ಮನೆಯಲ್ಲಿರುವಾಗ ಪರಿಚಯದ ಜೀವನ್ ಮತ್ತು ಸುರೇಶ್ ಎಂಬವರು ಮನೆಗೆ ಅಕ್ರಮ ಪ್ರವೇಶ ಮಾಡಿದ್ದು, ಈ ಪೈಕಿ ಜೀವನ್ ಎಂಬವರು ನನ್ನನ್ನು ಉದ್ದೇಶಿಸಿ ಅವಾಚ್ಯವಾಗಿ ಬೈದು, ನನ್ನೊಂದಿಗೆ ಅನುಚಿತವಾಗಿ ವರ್ತಿಸಿ, ಜೀವ ಬೆದರಿಕೆ ಒಡ್ಡಿದ್ದಾರೆ. ಈ ವೇಳೆ ಪತಿಗೆ ಹೆಲ್ಮೆಟ್‌ನಿಂದ ಹಲ್ಲೆ ಮಾಡಿದ್ದು ಚಿಕಿತ್ಸೆಗಾಗಿ ಅವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆರೋಪಿಸಿದ್ದಾರೆ.

ಡಾಲಿ ಅವರು ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಲಂ: 448, 504, 354, 324, 323, 506 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

Related posts

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

Suddi Udaya

ಶಿಶಿಲ ಜನಸ್ಪಂದನ ಸಭೆ: ಶಿಶಿಲ ಸೇತುವೆ ನಿರ್ಮಾಣಕ್ಕೆ ಅನುದಾನ ಮಂಜೂರಾದ ಬಗ್ಗೆ ಅಧಿಕೃತ ಆದೇಶ ಬಂದಿಲ್ಲ – ಶಾಸಕ ಹರೀಶ್ ಪೂಂಜ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಉಜಿರೆ: ಮೌಲ್ಯ ನಾಯಕ್ ರವರಿಗೆ ಸ್ವರ್ಣಪದಕ ಹಸ್ತಾಂತರ

Suddi Udaya

ನಿರಂತರ ಮಳೆ: ಮದ್ದಡ್ಕ ಆಲಂದಿಲ ಮದರಸ ಬಳಿ ಚರಂಡಿ ಇಲ್ಲದೆ‌ ರಸ್ತೆಯಲ್ಲೇ ಹರಿದ ನೀರು

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ತರಬೇತಿ

Suddi Udaya
error: Content is protected !!