23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

ನಡ: ಬೆಳ್ತಂಗಡಿ ತಾಲ್ಲೂಕು ಮಟ್ಟದ ಯೋಗ ಸ್ಪರ್ದೆ ಸರಕಾರಿ ಪ್ರೌಢಶಾಲೆ ನಡದಲ್ಲಿ ಆಯೋಜಿಸಲಾಗಿದ್ದು, ಇದರ ಉದ್ಘಾಟನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ವಿರೂಪಾಕ್ಷಪ್ಪ ರವರು ನೆರವೇರಿಸಿದರು.

ಈ ಸ್ಪರ್ಧೆಯನ್ನು ಯೋಗಾಸನ ಮುದ್ರೆಯ ಪ್ರತಿಕೃತಿಯನ್ನು ಅನಾವರಣಗೊಳಿಸಿ ಹಾಗೂ ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಯೋಗವು ನಮ್ಮ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಅತೀ ಅಗತ್ಯವೆಂದು ಹೇಳಿದರು. ನಡ ಗ್ರಾಮ ಪಂಚಾಯತಿನ ನಿರ್ಗಮನ ಅಧ್ಯಕ್ಷ ವಿಜಯ ಗೌಡ ಇವರು ಅಧ್ಯಕ್ಷತೆಯನ್ನು ವಹಿಸಿದ್ದು, ಭಾರತೀಯ ಪರಂಪರೆಯಾದ ಯೋಗವನ್ನು ಬದುಕಿನಲ್ಲಿ ಅಳವಡಿಸಿಕೊಂಡು, ದೇಶದ ಘನತೆಯನ್ನು ಹೆಚ್ಚಿಸುವವಲ್ಲಿ ಕಾಣಿಕೆ ನೀಡಲು ಕರೆ ನೀಡಿದರು.

ಸಮಾರಂಭದಲ್ಲಿ ಬೆಳ್ತಂಗಡಿ ತಾಲೂಕು ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ಎಸ್.ಡಿ.ಎಂ.ಸಿ.ಉಪಾಧ್ಯಕ್ಷರಾದ ಸುಧಾಕರ್, ಸದಸ್ಯರುಗಳಾದ ಲಕ್ಷ್ಮಣ ನಾಯ್ಕ, ಆನಂದ ಶೆಟ್ಟಿ ಉಪಸ್ಥಿತರಿದ್ದರು.

ಮುಖ್ಯಶಿಕ್ಷಕ ಯಾಕೂಬ್ ಎಸ್ ಸ್ವಾಗತಿಸಿ, ದೈಹಿಕ ಶಿಕ್ಚಣ ಶಿಕ್ಷಕಿ ಶ್ರೀಮತಿ ಸುಜಯ ಬಿ ಧನ್ಯವಾದವಿತ್ತರು. ಹಿಂದಿ ಶಿಕ್ಷಕ ಮೋಹನ ಬಾಬು ಕಾರ್ಯಕ್ರಮದ ನಿರೂಪಣೆಗೈದರು. ತಾಲೂಕಿನಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದಿಂದ ನೂರಕ್ಕೂ ಮಿಕ್ಕಿದ ಸ್ಪರ್ಧಾಳುಗಳು ಭಾಗವಹಿಸುತ್ತಿದ್ದಾರೆ.

Related posts

ಸ್ಟೂಡೆಂಟ್ ನರ್ಸಸ್ ಅಸೋಸಿಯೇಷನ್ ಇನ್ ಟ್ರೈನ್ಡ್ ನರ್ಸಸ್ ಅಸೋಸಿಯೇಷನ್ ಆಫ್ ಇಂಡಿಯಾ ಕಾರ್ಯದರ್ಶಿಯಾಗಿ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ಸಿಂಚನಾ ಎಂ.ಡಿ ಆಯ್ಕೆ

Suddi Udaya

ಗೇರುಕಟ್ಟೆ ಮನ್‌ಶರ್ ಕಾಲೇಜು ವತಿಯಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾವನದಲ್ಲಿ ವನಮಹೋತ್ಸವ ಆಚರಣೆ

Suddi Udaya

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
error: Content is protected !!