July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

ಬೆಳ್ತಂಗಡಿ; ಇಲ್ಲಿನ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಬೆಳ್ಳಿಹಬ್ಬ ವರ್ಷ ಆಚರಿಸಿಕೊಳ್ಳುತ್ತಿರುವ ಧರ್ಮಾಧ್ಯಕ್ಷ ಹಾಗೂ ಬೆಳ್ತಂಗಡಿ ತಾಲೂಕು ಸೌಹಾರ್ದ ವೇದಿಕೆ ಸಂಸ್ಥಾಪಕ ಅಧ್ಯಕ್ಷರು ಆಗಿರುವ ಬಿಷಪ್ ಲಾರೆನ್ಸ್ ಮುಕ್ಕುಝಿ ಅವರಿಗೆ ಆ.11 ರಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗೌರವಾಭಿನಂದನೆ ಸಲ್ಲಿಸಲಾಯಿತು.

ಅವರ ಅಧಿಕೃತ ನಿವಾಸಕ್ಕೆ ತೆರಳಿದ ಲಯನ್ಸ್ ಸದಸ್ಯರನ್ನು ಪರಿಚಯಿಸಿಕೊಂಡ ಬಿಷಪ್ ಅವರು ವಿಶೇಷ ಪ್ರಾರ್ಥನೆ ಮೂಲಕ ಆಶೀರ್ವದಿಸಿದರು. ಭೇಟಿ ಮಾಡಿದ ಎಲ್ಲರಿಗೂ ಸಿಹಿತಿಂಡಿ ನೀಡಿ ಪುರಸ್ಕರಿಸಿದರು.
ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಕಾರ್ಯದರ್ಶಿ ಅನಂತಕೃಷ್ಣ, ಕೋಶಾಧಿಕಾರಿ ಸುಭಾಷಿಣಿ, ಲಯನ್ಸ್ ಸದಸ್ಯರುಗಳಾದ ಬಿ.ಪಿ ಅಶೋಕ್ ಕುಮಾರ್, ಧರಣೇಂದ್ರ ಕೆ ಜೈನ್, ಧತ್ತಾತ್ರೇಯ ಗೊಲ್ಲ, ವಿನ್ಸೆಂಟ್ ಟಿ ಡಿಸೋಜಾ ಉಪಸ್ಥಿತರಿದ್ದರು. ಅಶ್ರಫ್ ಆಲಿಕುಂಞಿ ಮುಂಡಾಜೆ ಕಾರ್ಯಕ್ರಮ ಸಂಯೋಜಿಸಿದರು.

Related posts

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ತಲೆಮರೆಸಿಕೊಂಡು ಮೃತಪಟ್ಟ ಆರೋಪಿಯ ಮರಣ ಪತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ಭಜನಾ ತಂಡದ ಸದಸ್ಯರಿಗೆ ಸಮವ‌ಸ್ತ್ರ ವಿತರಣೆ

Suddi Udaya

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!