September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

ಮಡಂತ್ಯಾರು: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ನಾಗರಾಜ ಮರಕಡ ರವರು ಬಳ್ಳಮಂಜದಿಂದ ಮಡಂತ್ಯಾರು ಕಡೆಗೆ ಬಾಡಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆಟೋದಲ್ಲಿದ್ದ ಪ್ರಯಾಣಿಕರು ಬ್ಯಾಗ್ ನ್ನು ಮರೆತು ಬಿಟ್ಟು ಹೋಗಿದ್ದು ಅದನ್ನು ವಾಪಸ್ಸು ಪ್ರಾಯಾಣಿಕರಿಗೆ ತಲುಪಿಸುವಲ್ಲಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಆಟೋ ಚಾಲಕ ನಾಗರಾಜ್ ಮರಕಡ ರವರು ಮರೆತು ಬಿಟ್ಟು ಹೋಗಿದ್ದ ಬ್ಯಾಗ್ ನ್ನು ಕಂಡು ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ ಇವರಿಗೆ ಕರೆ ಮಾಡಿ ತಿಳಿಸಿದರು. ಎಲ್ಲಾ ವಾಟ್ಸಾಪ್ ಮೊಬೈಲ್ ಸಂದೇಶದಲ್ಲಿ ಬರೆದು ಗ್ರೂಪುಗಳಿಗೆ ಕಳುಹಿಸಲಾಯಿತು.

ನಂತರ ಆ ಬ್ಯಾಗಿನಲ್ಲಿ ಇದ್ದ ಸರ್ಕಾರಿ ಆಸ್ಪತ್ರೆ ಮಚ್ಚಿನ ಇಲ್ಲಿಯ ಮದ್ದಿನ ಚೀಟಿ ಕಂಡು ಆ ಚೀಟಿ ನ ಮೂಲಕ ಅಲ್ಲಿನ ಸಿಸ್ಟರ್ ಅನ್ನು ಫೋನ್ ಮೂಲಕ ಸಂಪರ್ಕಿಸಿ. ವಾರಸುದಾರರ ಸುನೀತ ಕಜೆ ಪಾಲೇದ್ ಇವರ ನಂಬರ್ ಪಡೆದು ಸಂಪರ್ಕಿಸಿ ಅವರಿಗೆ ವಿತರಿಸಲಾಯಿತು.

ಆಟೋ ಚಾಲಕ ನಾಗರಾಜ್ ಮರಕಡ ರವರಿಗೆ ಆಟೋ ಚಾಲಕರು ಮಾಲಕರ ಸಂಘ ಮಡಂತ್ಯಾರು ವಲಯ ಇವರ ಪ್ರಾಮಾಣಿಕತೆಗೆ ಅಭಿನಂದನೆಯನ್ನು ಸಲ್ಲಿಸಿದರು.

Related posts

ಕಳೆಂಜ ದೇವಸ್ಥಾನದಲ್ಲಿ ಬೃಹತ್ ನೇಜಿ ನಾಟಿ ಕಾರ್ಯಕ್ರಮ

Suddi Udaya

ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸುಬ್ರಹ್ಮಣ್ಯ ಸೀನಿಯರ್ ಚೇಂಬರ್ ಹಾಗೂ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್‌ ಸಹಯೋಗದಲ್ಲಿ ಕುಮಾರಧಾರದ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya
error: Content is protected !!