27.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿ

ಹಾಡು ಹಗಲೇ ಲಾಯಿಲದ ದೇಜಪ್ಪರ ಮನೆಗೆ ನುಗ್ಗಿದ ಕಳ್ಳರು: ರೂ.20 ಸಾವಿರ ನಗದು ಸಹಿತ ರೂ.40 ಸಾವಿರ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ : ಹಾಡು ಹಗಲೇ
ಲಾಯಿಲ ಗ್ರಾಮದ ನಿವಾಸಿ ದೇಜಪ್ಪ ಎಂಬವರ ಮನೆಗೆ ನುಗ್ಗಿದ ಕಳ್ಳರು ರೂ.20 ಸಾವಿರ ನಗದು ಸಹಿತ ಚಿನ್ನಾಭರಣ ಕಳವುಗೈದ ಘಟನೆ ಆ.10ರಂದು ವರದಿಯಾಗಿದೆ.
ಆ.10 ರಂದು ಬೆಳಿಗ್ಗೆ 8.30 ರಿಂದ ಸಂಜೆ 5.30ರ ಅವಧಿಯಲ್ಲಿ ದೇಜಪ್ಪರ ಮನೆಯಲ್ಲಿ ಯಾರು ಇಲ್ಲದ ವೇಳೆ ಯಾರೋ ಕಳ್ಳರು ಮನೆಯ ಬಲಬದಿ ಇರುವ ಸ್ಟೋರ್ ರೂಂ ನಿಂದ ಮರದ ಕಿಟಕಿಯನ್ನು ಯಾವುದೋ ಆಯುಧದಿಂದ ಮುರಿದು ಗೋಡ್ರೇಜ್ ನ ಬೀಗವನ್ನು ಅಲ್ಲಿಯೇ ಇಟ್ಟಿದ್ದ ಕೀಯಿಂದ ಲಾಕ್ ತೆಗೆದು ಗೊಡ್ರೇಜಿನಲ್ಲಿ ಇಟ್ಟಿರುವ ಸುಮಾರು ರೂ.20 ಸಾವಿರ ನಗದು ಮತ್ತು ಸುಮಾರು 8 ಗ್ರಾಂ ತೂಕದ ಚಿನ್ನಾಭರಣ ಅಂದಾಜು ಮೌಲ್ಯ ಸುಮಾರು 40ಸಾವಿರ ವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುವುದಾಗಿ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದೆ.
. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 73/2023 ಕಲಂ;454,380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಅಬಕಾರಿ ದಳ ದಾಳಿ ಶೇಖರಿಸಿಟ್ಟಿದ್ದ ರೂ.29 ಸಾವಿರ ಮದ್ಯ ವಶಕ್ಕೆ : ಆರೋಪಿ ಬಂಧನ

Suddi Udaya

ಅಕ್ರಮ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸ್ ದಾಳಿ: ದನದ ಮಾಂಸ ಹಾಗೂ ಇಬ್ಬರು ಆರೋಪಿಗಳ ಬಂಧನ

Suddi Udaya

ಜೈನ್ ಪೇಟೆ ಬಳಿ ಹಾಲು ಸಾಗಾಟದ ಟ್ಯಾಂಕರ್ ಗೆ ಟೆಂಪೋ ಹಿಂದಿನಿಂದ ಡಿಕ್ಕಿ

Suddi Udaya

ಬುರುಡೆ ಪ್ರಕರಣ; ನ್ಯಾಯಾಧೀಶರ ಮುಂದೆ ಹೇಳಿಕೆ ಕೊಟ್ಟು ವಾಪಸ್ ತೆರಳಿದ ಪ್ರದೀಪ್

Suddi Udaya

ಕುಪ್ಪೆ ಟ್ಟಿ : ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

Suddi Udaya
error: Content is protected !!