23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಹಾಡು ಹಗಲೇ ಲಾಯಿಲದ ದೇಜಪ್ಪರ ಮನೆಗೆ ನುಗ್ಗಿದ ಕಳ್ಳರು: ರೂ.20 ಸಾವಿರ ನಗದು ಸಹಿತ ರೂ.40 ಸಾವಿರ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ : ಹಾಡು ಹಗಲೇ
ಲಾಯಿಲ ಗ್ರಾಮದ ನಿವಾಸಿ ದೇಜಪ್ಪ ಎಂಬವರ ಮನೆಗೆ ನುಗ್ಗಿದ ಕಳ್ಳರು ರೂ.20 ಸಾವಿರ ನಗದು ಸಹಿತ ಚಿನ್ನಾಭರಣ ಕಳವುಗೈದ ಘಟನೆ ಆ.10ರಂದು ವರದಿಯಾಗಿದೆ.
ಆ.10 ರಂದು ಬೆಳಿಗ್ಗೆ 8.30 ರಿಂದ ಸಂಜೆ 5.30ರ ಅವಧಿಯಲ್ಲಿ ದೇಜಪ್ಪರ ಮನೆಯಲ್ಲಿ ಯಾರು ಇಲ್ಲದ ವೇಳೆ ಯಾರೋ ಕಳ್ಳರು ಮನೆಯ ಬಲಬದಿ ಇರುವ ಸ್ಟೋರ್ ರೂಂ ನಿಂದ ಮರದ ಕಿಟಕಿಯನ್ನು ಯಾವುದೋ ಆಯುಧದಿಂದ ಮುರಿದು ಗೋಡ್ರೇಜ್ ನ ಬೀಗವನ್ನು ಅಲ್ಲಿಯೇ ಇಟ್ಟಿದ್ದ ಕೀಯಿಂದ ಲಾಕ್ ತೆಗೆದು ಗೊಡ್ರೇಜಿನಲ್ಲಿ ಇಟ್ಟಿರುವ ಸುಮಾರು ರೂ.20 ಸಾವಿರ ನಗದು ಮತ್ತು ಸುಮಾರು 8 ಗ್ರಾಂ ತೂಕದ ಚಿನ್ನಾಭರಣ ಅಂದಾಜು ಮೌಲ್ಯ ಸುಮಾರು 40ಸಾವಿರ ವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುವುದಾಗಿ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದೆ.
. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 73/2023 ಕಲಂ;454,380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್.ಐ.ಟಿ; 14 ದಿನಗಳ ನ್ಯಾಯಾಂಗ ಬಂಧನ

Suddi Udaya

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya
error: Content is protected !!