25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯೋತ್ಸವ ಹಾಗೂ ಆಗಸ್ಟ್ 17ರಂದು ನಡೆಯುವ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಪ್ರಯುಕ್ತ ಶಾಲಾ ಮೇಲುಸ್ತುವಾರಿ ಸಮಿತಿ ಹಾಗೂ ಇಲ್ಲಿಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶ್ರಮದಾನವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಶ್ರಮದಾನದಲ್ಲಿ ಶಾಲಾ ವಿದ್ಯಾರ್ಥಿಗಳ ಪೋಷಕರುಗಳು ಹಳೆ ವಿದ್ಯಾರ್ಥಿಗಳು, ಶಾಲಾ ಮೇಲುಸ್ತುವಾರಿ ಸಮಿತಿಯ ಸದಸ್ಯರುಗಳು ಮತ್ತು ವಿದ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸಿದರು.

ಭಾಗವಹಿಸಿದ ಎಲ್ಲರಿಗೂ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ಶಿಕ್ಷಕಿಯರು, ಮೇಲುಸ್ತುವಾರಿ ಸಮಿತಿಯವರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಧನ್ಯವಾದ ಅರ್ಪಿಸಿ ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ನಡೆಯುವ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವಂತೆ ಕೇಳಿಕೊಂಡರು.

ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಿನಯ ಕೆ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಮಾಯಿಲಪ್ಪ ಗೌಡ ಉಮಿಯ, ಕೂಸಪ್ಪ ಗೌಡ ನಾಗನೊಡಿ, ಪ್ರಧಾನ ಕಾರ್ಯದರ್ಶಿಯಾದ ಪಿ ಚಂದ್ರಶೇಖರ್ ಸಾಲ್ಯಾನ್, ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಹರೀಶ್ ಗೌಡ ಬಜಿಲ, ಶಾಲಾ ಮುಖ್ಯೋಪಾಧ್ಯಾಯರಾದ ಬಳಿರಾಮ ಲಮಾಣಿ, ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಗೌಡ ಪಾಂಬೇಲು ಉಪಸ್ಥಿತರಿದ್ದರು.

Related posts

ಸರಕಾರಿ ಪ್ರೌಢಶಾಲೆ ಪೆರ್ಲ-ಬೈಪಾಡಿಯಲ್ಲಿ ಸ್ವಾಸ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ನಾವೂರು ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

Suddi Udaya

ಕುವೆಟ್ಟು: ಚರಂಡಿ ವ್ಯವಸ್ಥೆ ದುರಸ್ತಿಗೊಳಿಸಿ, ಕಾಮಗಾರಿ ಪ್ರಾರಂಭ ಮಾಡುವಂತೆ ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಹಾಗೂ ಪಿಡಿಒ ರವರಿಗೆ ಮನವಿ

Suddi Udaya

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!