25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯೋತ್ಸವ ಹಾಗೂ ಆಗಸ್ಟ್ 17ರಂದು ನಡೆಯುವ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಪ್ರಯುಕ್ತ ಶಾಲಾ ಮೇಲುಸ್ತುವಾರಿ ಸಮಿತಿ ಹಾಗೂ ಇಲ್ಲಿಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶ್ರಮದಾನವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಶ್ರಮದಾನದಲ್ಲಿ ಶಾಲಾ ವಿದ್ಯಾರ್ಥಿಗಳ ಪೋಷಕರುಗಳು ಹಳೆ ವಿದ್ಯಾರ್ಥಿಗಳು, ಶಾಲಾ ಮೇಲುಸ್ತುವಾರಿ ಸಮಿತಿಯ ಸದಸ್ಯರುಗಳು ಮತ್ತು ವಿದ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸಿದರು.

ಭಾಗವಹಿಸಿದ ಎಲ್ಲರಿಗೂ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ಶಿಕ್ಷಕಿಯರು, ಮೇಲುಸ್ತುವಾರಿ ಸಮಿತಿಯವರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಧನ್ಯವಾದ ಅರ್ಪಿಸಿ ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ನಡೆಯುವ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವಂತೆ ಕೇಳಿಕೊಂಡರು.

ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಿನಯ ಕೆ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಮಾಯಿಲಪ್ಪ ಗೌಡ ಉಮಿಯ, ಕೂಸಪ್ಪ ಗೌಡ ನಾಗನೊಡಿ, ಪ್ರಧಾನ ಕಾರ್ಯದರ್ಶಿಯಾದ ಪಿ ಚಂದ್ರಶೇಖರ್ ಸಾಲ್ಯಾನ್, ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಹರೀಶ್ ಗೌಡ ಬಜಿಲ, ಶಾಲಾ ಮುಖ್ಯೋಪಾಧ್ಯಾಯರಾದ ಬಳಿರಾಮ ಲಮಾಣಿ, ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಗೌಡ ಪಾಂಬೇಲು ಉಪಸ್ಥಿತರಿದ್ದರು.

Related posts

ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಹಿರಿಯ ಛಾಯಾಗ್ರಹಕ ಕುಶಾಲಪ್ಪ ರೈ ರವರಿಗೆ ಗೌರವಾರ್ಪಣೆ

Suddi Udaya

ನಾರಾವಿಯಲ್ಲಿ ಶ್ರೀ ಗುರುದೇವ ಪ.ಪೂ. ಕಾಲೇಜಿನ ಎನ್. ಎಸ್. ಎಸ್ ಶಿಬಿರ ಸಮಾರೋಪ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆ: ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ರವರಿಗೆ ಚಿನ್ನದ ಪದಕ

Suddi Udaya
error: Content is protected !!