25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯೋತ್ಸವ ಹಾಗೂ ಆಗಸ್ಟ್ 17ರಂದು ನಡೆಯುವ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಪ್ರಯುಕ್ತ ಶಾಲಾ ಮೇಲುಸ್ತುವಾರಿ ಸಮಿತಿ ಹಾಗೂ ಇಲ್ಲಿಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶ್ರಮದಾನವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಶ್ರಮದಾನದಲ್ಲಿ ಶಾಲಾ ವಿದ್ಯಾರ್ಥಿಗಳ ಪೋಷಕರುಗಳು ಹಳೆ ವಿದ್ಯಾರ್ಥಿಗಳು, ಶಾಲಾ ಮೇಲುಸ್ತುವಾರಿ ಸಮಿತಿಯ ಸದಸ್ಯರುಗಳು ಮತ್ತು ವಿದ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಹಕರಿಸಿದರು.

ಭಾಗವಹಿಸಿದ ಎಲ್ಲರಿಗೂ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ಶಿಕ್ಷಕಿಯರು, ಮೇಲುಸ್ತುವಾರಿ ಸಮಿತಿಯವರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಧನ್ಯವಾದ ಅರ್ಪಿಸಿ ಮುಂದಿನ ದಿನಗಳಲ್ಲಿ ಶಾಲೆಯಲ್ಲಿ ನಡೆಯುವ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸುವಂತೆ ಕೇಳಿಕೊಂಡರು.

ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಿನಯ ಕೆ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಮಾಯಿಲಪ್ಪ ಗೌಡ ಉಮಿಯ, ಕೂಸಪ್ಪ ಗೌಡ ನಾಗನೊಡಿ, ಪ್ರಧಾನ ಕಾರ್ಯದರ್ಶಿಯಾದ ಪಿ ಚಂದ್ರಶೇಖರ್ ಸಾಲ್ಯಾನ್, ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಹರೀಶ್ ಗೌಡ ಬಜಿಲ, ಶಾಲಾ ಮುಖ್ಯೋಪಾಧ್ಯಾಯರಾದ ಬಳಿರಾಮ ಲಮಾಣಿ, ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಗೌಡ ಪಾಂಬೇಲು ಉಪಸ್ಥಿತರಿದ್ದರು.

Related posts

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಎಕ್ಸೆಲ್ ಗುರುವಾಯನಕೆರೆ ರಾಜ್ಯದಲ್ಲೇ ಅಮೋಘ ಸಾಧನೆ

Suddi Udaya

ಬಾರ್ಯ: ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇ.ಧ. ಗ್ರಾ ಯೋಜನೆಯಿಂದ ದೇಣಿಗೆ ಹಸ್ತಾಂತರ

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ತಾ.ಪಂ. ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭವಾನಿಶಂಕರ್ ಅಧಿಕಾರ ಸ್ವೀಕಾರ

Suddi Udaya

ಗಡಾಯಿಕಲ್ಲಿನಲ್ಲಿ ಕಾಣಿಸಿಕೊಂಡಬೆಂಕಿ

Suddi Udaya
error: Content is protected !!