25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜು

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಧರ್ಮಸ್ಥಳ: “ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಸಂಸ್ಕಾರವನ್ನು ಮೈಗೂಡಿಸಿಕೊಂಡು ಪ್ರತಿಭಾನ್ವಿತರಾದಾಗ ಸುಂದರವಾದ ವ್ಯಕ್ತಿತ್ವ ರೂಪುಗೊಳ್ಳುತ್ತದೆ ” ಎಂದು ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ಉಜಿರೆ ಇಲ್ಲಿಯ ಕನ್ನಡ ಉಪನ್ಯಾಸಕರಾದ ಶ್ರೀ ಮಹಾವೀರ ಜೈನ್ ಹೇಳಿದರು.

ಅವರು ಆ.11ರಂದು ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳದ 2023-24ನೇ ಸಾಲಿನ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ , ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿ ಬಿ. ಸೋಮಶೇಖರ ಶೆಟ್ಟಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ದಿವಾಕರ ಕೊಕ್ಕಡ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಎನ್ ಪದ್ಮರಾಜು ಅಧ್ಯಕ್ಷತೆ ವಹಿಸಿದ್ದರು. “

ವಿವಿಧ ಸಂಘಗಳ ವಿದ್ಯಾರ್ಥಿ ಪ್ರತಿನಿಧಿಗಳು ತಮ್ಮ ಸಂಘಗಳ ವಾರ್ಷಿಕ ಯೋಜನೆಯನ್ನು ಮಂಡಿಸಿದರು. ಇದೇ ಸಂದರ್ಭದಲ್ಲಿ 2022- 23 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ 20 ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಸಿಬ್ಬಂದಿವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ಶಶಿಧರ ಸ್ವಾಗತಿಸಿ, ಶಿಕ್ಷಕಿ ಭವ್ಯ ಹೆಗಡೆ ವಂದಿಸಿದ ಈ ಕಾರ್ಯಕ್ರಮವನ್ನು ಶಿಕ್ಷಕ ಯುವರಾಜ ನಿರೂಪಿಸಿದರು.

Related posts

ಲಾಯಿಲ: ಕನ್ನಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ಎದುರು ಗಂಟೆ ಮಂಟಪದ ಶಿಲಾನ್ಯಾಸ

Suddi Udaya

ಬಂದಾರು : ಪೆರ್ಲ -ಬೈಪಾಡಿಯಲ್ಲಿ ನೂತನ ಶಾಖಾ ಅಂಚೆ ಕಚೇರಿ ಉದ್ಘಾಟನೆ

Suddi Udaya
error: Content is protected !!