23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜು

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

ಧರ್ಮಸ್ಥಳ: “ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಸಂಸ್ಕಾರವನ್ನು ಮೈಗೂಡಿಸಿಕೊಂಡು ಪ್ರತಿಭಾನ್ವಿತರಾದಾಗ ಸುಂದರವಾದ ವ್ಯಕ್ತಿತ್ವ ರೂಪುಗೊಳ್ಳುತ್ತದೆ ” ಎಂದು ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ಉಜಿರೆ ಇಲ್ಲಿಯ ಕನ್ನಡ ಉಪನ್ಯಾಸಕರಾದ ಶ್ರೀ ಮಹಾವೀರ ಜೈನ್ ಹೇಳಿದರು.

ಅವರು ಆ.11ರಂದು ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳದ 2023-24ನೇ ಸಾಲಿನ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭದಲ್ಲಿ ಕಾರ್ಯಕ್ರಮ ಉದ್ಘಾಟಿಸಿ , ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಕ್ಷೇಮಪಾಲನಾಧಿಕಾರಿ ಬಿ. ಸೋಮಶೇಖರ ಶೆಟ್ಟಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ದಿವಾಕರ ಕೊಕ್ಕಡ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಎನ್ ಪದ್ಮರಾಜು ಅಧ್ಯಕ್ಷತೆ ವಹಿಸಿದ್ದರು. “

ವಿವಿಧ ಸಂಘಗಳ ವಿದ್ಯಾರ್ಥಿ ಪ್ರತಿನಿಧಿಗಳು ತಮ್ಮ ಸಂಘಗಳ ವಾರ್ಷಿಕ ಯೋಜನೆಯನ್ನು ಮಂಡಿಸಿದರು. ಇದೇ ಸಂದರ್ಭದಲ್ಲಿ 2022- 23 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ 20 ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ಸಿಬ್ಬಂದಿವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ಶಶಿಧರ ಸ್ವಾಗತಿಸಿ, ಶಿಕ್ಷಕಿ ಭವ್ಯ ಹೆಗಡೆ ವಂದಿಸಿದ ಈ ಕಾರ್ಯಕ್ರಮವನ್ನು ಶಿಕ್ಷಕ ಯುವರಾಜ ನಿರೂಪಿಸಿದರು.

Related posts

ಮೇಲಂತಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಪಾಲೆತ್ತಡಿ ಗುತ್ತು ಜೀರ್ಣೋದ್ದಾರದ ಸಮಾಲೋಚನ ಸಭೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಪಟ್ರಮೆ ಗ್ರಾಮ ಪಂಚಾಯತ್ ಬಳಿ ಬಿಜೆಪಿ ಪ್ರತಿಭಟನೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ಭೇಟಿ; ವಿಶೇಷ ಪೂಜೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಪೂಜಾ ಸಮಿತಿಯ ಅಧ್ಯಕ್ಷ ಸಂತೋಷ್ ಬಂಗೇರರವರ ತಂಡದ ಸದಸ್ಯರಿಂದ ನವರಾತ್ರಿಯ ವಿಶೇಷ ಭಜನೆ

Suddi Udaya

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಚಿಬಿದ್ರೆ – ಧರ್ಮಸ್ಥಳ ರಸ್ತೆಯಲ್ಲಿ ಬಿದ್ದ ಮರ : ಶೌರ್ಯ ವಿಪತ್ತು ಘಟಕದಿಂದ ತೆರವು

Suddi Udaya
error: Content is protected !!