25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

ಬೆಳ್ತಂಗಡಿ: ಕ್ರಾಸ್ ಬೆಂಗಳೂರು, ಕಾರಿತಾಸ್ ಇಂಡಿಯಾ ನವದೆಹಲಿ ಹಾಗೂ ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಆಶ್ರಯದಲ್ಲಿ ಸಂಸ್ಥೆಯ ಕಾರ್ಯತಂತ್ರ ಯೋಜನೆಯ ಬಗ್ಗೆ ತರಬೇತಿ ಕಾರ್ಯಾಗಾರವು ಬೆಳ್ತಂಗಡಿ ಜ್ಞಾನ ನಿಲಯದಲ್ಲಿ ಆ.11 ರಂದು ನಡೆಯಿತು.

ಜ್ಞಾನ ನಿಲಯದ ನಿರ್ದೇಶಕರಾದ ವಂ. ಫಾ. ಜೋಸೆಫ್ ಮಟ್ಟಂರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕ್ರಾಸ್ ಸಂಸ್ಥೆಯ ನಿರ್ದೇಶಕ ವಂ. ಫಾ. ರಿಚರ್ಡ್ ಪಾಯಿಸ್, ಕ್ರಾಸ್ ಸಂಸ್ಥೆಯ ತರಬೇತಿ ಸಂಯೋಜಕ ವರ್ಗೀಸ್ ಜಿ.ಎಂ. ಹಾಗೂ ಕಾರಿತಾಸ್ ಇಂಡಿಯಾ ಸಂಸ್ಥೆಯ ಕರ್ನಾಟಕ ರಾಜ್ಯ ಅಧಿಕಾರಿ ರಾಬರ್ಟ್ ಡಿ’ ಸೋಜಾರವರು ತರಬೇತಿ ಕಾರ್ಯಾಗಾರ ನಡೆಸಿಕೊಟ್ಟರು.

ವೇದಿಕೆಯಲ್ಲಿ ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕ ವಂ. ಫಾ. ಬಿನೋಯಿ ಎ.ಜೆ. ಉಪಸ್ಥಿತರಿದ್ದರು. ಬೆಳ್ತಂಗಡಿ ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಅಧ್ಯಕ್ಷೆ ಮಂಜುಳಾ ಜೋನ್, ಕಡಬ ಕಿರಣ್ ಮಹಿಳಾ ತಾಲೂಕು ಒಕ್ಕೂಟದ ಅಧ್ಯಕ್ಷೆ ಡೈಸಿ ಜೋಯಿ, ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಿಬ್ಬಂದಿ ವರ್ಗ ಹಾಗೂ ಮಂಗಳೂರು ರೋಶನಿ ನಿಲಯದ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ತರಬೇತಿಯಲ್ಲಿ ಪಾಲ್ಗೊಂಡಿದ್ದರು.

ಕ್ರಾಸ್ ಸಂಸ್ಥೆಯ ಸಿಬ್ಬಂದಿ ಬ್ರದರ್ ಅನಿಲ್ ಸೆಬಾಸ್ಟಿಯನ್ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕಿ ಸಿಸಿಲಿಯಾ ತಾವ್ರೊ ಸ್ವಾಗತಿಸಿದರು. ಸಂಯೋಜಕ ಸುನಿಲ್ ಗೊನ್ಸಾಲ್ವಿಸ್ ಕಾರ್ಯಕ್ರಮ ನಿರೂಪಿಸಿ, ಕಾರ್ಯಕರ್ತ ಮಾರ್ಕ್ ಡಿ’ ಸೋಜಾರವರು ವಂದಿಸಿದರು.

Related posts

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

Suddi Udaya

ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ: ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ನಾಗೇಶ್ ಕದ್ರಿ ನೇಮಕ

Suddi Udaya

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ: ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿ ಹಾಗೂ 20 ಮಂದಿ ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯ ಅವರಿಗೆ ಬೀಳ್ಕೊಡುಗೆ ಸಮಾರಂಭ: ಶಾಲೆಯ ಪ್ರಗತಿಗೆ ಶಿಕ್ಷಕಿ ವಿಜಯರವರ ಕೊಡುಗೆ ಅಪಾರ: ಮೋಹನ್ ಕುಮಾರ್

Suddi Udaya
error: Content is protected !!