25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌಜನ್ಯ ಕೊಲೆ ಪ್ರಕರಣ: ಆ.27 ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳ ಶಾಸಕರುಗಳು ಭಾಗಿ:

ಬೆಳ್ತಂಗಡಿ: ಉಜಿರೆ ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ ಒತ್ತಾಯಿಸಿ, ಆ. 27ರಂದು ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲಾ ಶಾಸಕರುಗಳು ಬೆಳ್ತಂಗಡಿಯ ಮಿನಿ ವಿಧಾನ ಸೌಧದ ಬಳಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.

ಬಳಿಕ ಸೌಜನ್ಯ ಹತ್ಯೆ ಪ್ರಕರಣವನ್ನು ಮರುತನಿಗೆ ಒಳಪಡಿಸಬೇಕು ಎಂದು ಆಗ್ರಹಿಸಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದರು.

ಅವರು ಆ.12ರಂದು ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಸೌಜನ್ಯ ಹೋರಾಟಕ್ಕೆ ನ್ಯಾಯ ಕೊಡಿಸಲು ಬಿಜೆಪಿ ಬದ್ಧವಾಗಿದೆ. ಸುಧೀರ್ಘ 11ವರ್ಷಗಳ ಕಾಲ ತನಿಖೆ ನಡೆದಿದೆ ಮೊದಲಿಗೆ ಸಿಐಡಿ ತನಿಖೆ, ನಂತರ ಸಿಬಿಐ ತನಿಖೆ ಕೂಡ ನಡೆದು ಇದ್ದ ಒಬ್ಬ ಆರೋಪಿ ಕೂಡ ಈಗ ಬಿಡುಗಡೆಯಾಗಿದ್ದಾರೆ. ಹಾಗಾಗಿ ಸೌಜನ್ಯಳಿಗೆ ನ್ಯಾಯ ಸಿಕ್ಕಿಲ್ಲ ನಾವು ಸೌಜನ್ಯ ಕುಟುಂಬದ ಜೊತೆ ಇದ್ದು ಈ ಪ್ರಕರಣದಲ್ಲಿ ನ್ಯಾಯಾಕ್ಕಾಗಿ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ಇದೇ ತಿಂಗಳ ಆಗಸ್ಟ್ 27ರಂದು ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲಾ ಶಾಸಕರುಗಳು ಬೆಳ್ತಂಗಡಿಯ ಮಿನಿ ವಿಧಾನ ಸೌಧದ ಬಳಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.

ಅಂದು ನಡೆಯುವ ಪ್ರತಿಭಟನೆಯ ನಂತರ, ಸೌಜನ್ಯ ಹತ್ಯೆ ಪ್ರಕರಣವನ್ನು ಮರುತನಿಗೆ ಒಳಪಡಿಸಬೇಕು ಎನ್ನುವ ಆಗ್ರಹದ ಮನವಿಯನ್ನು ಮುಖ್ಯಮಂತ್ರಿಗಳಿಗೆ ತಲುಪಿಸಲಾಗುವುದು. ತದನಂತರ ಇದೇ ಮನವಿಯನ್ನು ರಾಜ್ಯಪಾಲರ ಬಳಿಯೂ ಬಿಜೆಪಿ ನಿಯೋಗವನ್ನು ಕೊಂಡೊಯ್ಯಲಾಗುವುದು ಮತ್ತು ಮರು ತನಿಖೆ ನಡೆಸಲು ಒತ್ತಾಯಿಸಲಾಗುವುದು ಎಂದು ನಳಿನ್ ಕುಮಾರ್ ಕಟೀಲ್ ಈ ಸಂದರ್ಭ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಶಾಸಕ ಹರೀಶ್ ಪೂಂಜ, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಸಹಿತ ಇತರ ಪ್ರಮುಖರ ಜೊತೆ ಸುದ್ದಿಗೋಷ್ಠಿ ಕರೆದಿದ್ದರು.

Related posts

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಕ್ಷೇಮ ನಿಧಿ ಯೋಜನೆಯ 31ನೇ ಸಹಾಯಧನ ಹಸ್ತಾಂತರ

Suddi Udaya

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

Suddi Udaya

ಪ್ರಾಥಮಿಕ ಶಾಲೆಗಳ ಕೊಠಡಿ ನಿರ್ಮಾಣಕ್ಕೆ ಅನುದಾನ ಮತ್ತು ತಾಲೂಕಿನ ಮೂರು ಪ್ರಾಥಮಿಕ ಶಾಲೆಗಳನ್ನು ಕೆಪಿಎಸ್‌ ಶಾಲೆಯಾಗಿ ಮೇಲ್ದರ್ಜೆಗೇರಿಸಲು ಶಿಕ್ಷಣ ಸಚಿವರಿಗೆ ಮನವಿ

Suddi Udaya

ಬೆಳ್ತಂಗಡಿ: ಡಾ. ಸುಶ್ಮಿತಾ ಸಿ ಎಚ್ ರವರಿಗೆ ಪಿಹೆಚ್ ಡಿ ಪದವಿ

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ಮೈರೋಳ್ತಡ್ಕ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!