September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

ಉಜಿರೆ: ತುಳುನಾಡಿನ ವಿಶಿಷ್ಟ ಸಾಂಪ್ರದಾಯಿಕ ಆಚರಣೆ ಯಾದ ಆಟಿದ ಗೌಜಿ ಕಾರ್ಯಕ್ರಮ ಶ್ರೀ. ಧ. ಮo. ಪ ಪೂ ಕಾಲೇಜಿನಲ್ಲಿ ಆಯೋಜಿಸಲಾಯಿತು. ಕಾರ್ಯ್ರಮದ ಉದ್ಘಾಟನೆಯನ್ನು ಸಂಸ್ಥೆಯ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬಿ. ಸೋಮಶೇಖರ ಶೆಟ್ಟಿ ನೆರವೇರಿಸಿದರು.

ಪ್ರಧಾನ ಭಾಷಣಕಾರರಾದ ಕವಿತಾ ಉಮೇಶ್, ಮುಖ್ಯ ಅತಿಥಿಯಾಗಿ ಶ್ರೀ ಧ.ಮಂ ಶಿಕ್ಷಣ ಸಂಸ್ಥೆಗಳ ಹಾಸ್ಟೆಲ್ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಯುವರಾಜ ಪೂವಣಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ವಹಿಸಿದ್ದರು.

ಇದೇ ಸಂದರ್ಭದಲ್ಲಿ ತುಳುನಾಡಿನ ಸಂಪ್ರದಾಯಗಳಲ್ಲಿ ಒಂದಾದ ಆಟಿ ಕಳೆಂಜ ನೃತ್ಯ , ಆಟಿಯ ವಿಶೇಷ ತಿನಿಸುಗಳ ಪ್ರದರ್ಶನ, ಪುರಾತನ ವಸ್ತುಗಳು ಹಾಗೂ ಗಿಡಮೂಲಿಕೆಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು ಕಾರ್ಯಕ್ರಮದ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಸ್ಪರ್ಧಾ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು.

ವಿದ್ಯಾರ್ಥಿನಿ ಬಿಂದುಶ್ರೀ ಸ್ವಾಗತಿಸಿ ದೀಕ್ಷಿತ್ ವಂದಿಸಿದರು. ವಿದ್ಯಾರ್ಥಿನಿ ರಶ್ಮಿತ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಯಕ್ಷಿತ್ ಕಾರ್ಯಕ್ರಮ ನಿರೂಪಿಸಿದರು. ಕಲಾವಿಭಾಗದ ಅಧ್ಯಾಪಕರು ಕಾರ್ಯಕ್ರಮ ಸಂಯೋಜನೆಗೆ ಸಹಕರಿಸಿದರು.

Related posts

ವಿಧಾನಪರಿಷತ್‌ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

Suddi Udaya

ತೋಟಗಾರಿಕೆಯಲ್ಲಿ ವಿವಿಧ ಸಸಿಗಳು ಲಭ್ಯ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

Suddi Udaya

ಬಾರ್ಯ: ಆನೆಪಲ್ಲ ನಿವಾಸಿ ಸೇಸಪ್ಪ ನಾಯ್ಕ್ ನಿಧನ

Suddi Udaya

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya
error: Content is protected !!