25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

ಬೆಳ್ತಂಗಡಿ: ಅಲ್ಯೂಮಿನಿಯಂ ಏಣಿಯು ಆಕಸ್ಮಿಕವಾಗಿ ವಿದ್ಯುತ್‌ ತಂತಿಗೆ ಸ್ಪರ್ಷಿಸಿ ಕಲ್ಮಂಜ ಗ್ರಾಮದ ಅಂಬಟೆ ಮನೆ ನಿವಾಸಿ, ಕೃಷಿಕ ಶಶಿಧರನ್ ನಾಯರ್ (68) ಸಾವನ್ನಪ್ಪಿದ್ದಾರೆ.

ಆ.12 ರಂದು ಶಶಿಧರನ್ ಅವರು ಮನೆಯ ಹತ್ತಿರ ಇರುವ ತೋಟದ ತೆಂಗಿನ ಮರದಿಂದ ಸೀಯಾಳ ತೆಗೆಯಲೆಂದು ಮನೆಯಲ್ಲಿದ್ದ ಅಲ್ಯುಮಿನಿಯಂ ದೋಂಟಿಯನ್ನು ತೆಗೆದುಕೊಂಡು ಹೋಗಿದ್ದು ಹೋದ ಸ್ವಲ್ಪ ಹೊತ್ತಿನಲ್ಲಿ ಜೋರಾಗಿ ಬೊಬ್ಬೆ ಹಾಕಿದಂತೆ ಶಬ್ದ ಕೇಳಿಬಂದಿತ್ತು. ಈ ವೇಳೆ ಪತ್ನಿ ‌ಜಯಪ್ರಕಾಶಿನಿ ಹಾಗೂ ಮನೆಯಲ್ಲಿದ್ದ ಆಂಟನಿ ಹೋಗಿ ನೋಡಿದಾಗ ಶಶಿಧರ‌ನ್ ಪ್ರಜ್ಞೆ ತಪ್ಪಿ ಬಿದ್ದಿದ್ದರು.

ಕೂಡಲೇ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ದಾಗ‌ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವ ಕಾದಾಡಿ ತಿಳಿಸಿದ್ದಾರೆ.

ಅವರ ತೋಟದಲ್ಲಿ ಮೇಲ್ಗಡೆ ವಿದ್ಯುತ್‌ ತಂತಿಯು ಹಾದು ಹೋಗಿದ್ದು ವಿದ್ಯುತ್‌ ತಂತಿಗೆ ಶಶಿಧರ್‌ ನಾಯರ್‌ ರವರು ಹಿಡಿದುಕೊಂಡಿದ್ದ ಅಲ್ಯೂಮಿನಿಯಂ ದೋಂಟಿ ಆಕಸ್ಮಿಕವಾಗಿ ತಗುಲಿ ಅದರ ಮೂಲಕ ಶಶಿಧರನ್‌ ರವರ ದೇಹಕ್ಕೆ ವಿದ್ಯುತ್ ಪ್ರವಾಹಿಸಿ ವಿದ್ಯುತ್‌ ಶಾಕ್‌ ಹೊಡೆದು ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಕೇಸು ದಾಖಲಿಸಿದ್ದಾರೆ.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸಂಭ್ರಮದ ಪ್ರತಿಭಾ ದಿನಾಚರಣೆ

Suddi Udaya

ಇತಿಹಾಸ ಪ್ರಸಿದ್ದ ನಿಡಿಗಲ್ ಸಿರಿಜಾತ್ರಾ ಮಹೋತ್ಸವದ ಅಧ್ಯಕ್ಷರಾಗಿ ಯಶೋಧರ ಗೌಡ ಗುರಿಪಳ್ಳ ಆಯ್ಕೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಉಜಿರೆ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023’

Suddi Udaya

ಮುಂಡಾಜೆ ಕೀರ್ತನಾ ಕಲಾತಂಡದಿಂದ ದೀಪಾವಳಿ ಹಬ್ಬದ ಪ್ರಯುಕ್ತ ಅವಲಕ್ಕಿ– ಬೆಲ್ಲ ವಿತರಣೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಪದಗ್ರಹಣ

Suddi Udaya

ಒಂದು ಕ್ವಿಂಟಾಲ್ ಗಾಂಜಾ ವಶಪಡಿಸಿದ ಪ್ರಕರಣ: ಕಕ್ಕಿಂಜೆಯ ಇಬ್ಬರು ಸೇರಿದಂತೆ ಮೂವರು ಆರೋಪಿಗಳ ಬಂಧನ

Suddi Udaya
error: Content is protected !!