23.6 C
ಪುತ್ತೂರು, ಬೆಳ್ತಂಗಡಿ
June 9, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

ಬೆಳ್ತಂಗಡಿ: ಅಲ್ಯೂಮಿನಿಯಂ ಏಣಿಯು ಆಕಸ್ಮಿಕವಾಗಿ ವಿದ್ಯುತ್‌ ತಂತಿಗೆ ಸ್ಪರ್ಷಿಸಿ ಕಲ್ಮಂಜ ಗ್ರಾಮದ ಅಂಬಟೆ ಮನೆ ನಿವಾಸಿ, ಕೃಷಿಕ ಶಶಿಧರನ್ ನಾಯರ್ (68) ಸಾವನ್ನಪ್ಪಿದ್ದಾರೆ.

ಆ.12 ರಂದು ಶಶಿಧರನ್ ಅವರು ಮನೆಯ ಹತ್ತಿರ ಇರುವ ತೋಟದ ತೆಂಗಿನ ಮರದಿಂದ ಸೀಯಾಳ ತೆಗೆಯಲೆಂದು ಮನೆಯಲ್ಲಿದ್ದ ಅಲ್ಯುಮಿನಿಯಂ ದೋಂಟಿಯನ್ನು ತೆಗೆದುಕೊಂಡು ಹೋಗಿದ್ದು ಹೋದ ಸ್ವಲ್ಪ ಹೊತ್ತಿನಲ್ಲಿ ಜೋರಾಗಿ ಬೊಬ್ಬೆ ಹಾಕಿದಂತೆ ಶಬ್ದ ಕೇಳಿಬಂದಿತ್ತು. ಈ ವೇಳೆ ಪತ್ನಿ ‌ಜಯಪ್ರಕಾಶಿನಿ ಹಾಗೂ ಮನೆಯಲ್ಲಿದ್ದ ಆಂಟನಿ ಹೋಗಿ ನೋಡಿದಾಗ ಶಶಿಧರ‌ನ್ ಪ್ರಜ್ಞೆ ತಪ್ಪಿ ಬಿದ್ದಿದ್ದರು.

ಕೂಡಲೇ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ದಾಗ‌ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವ ಕಾದಾಡಿ ತಿಳಿಸಿದ್ದಾರೆ.

ಅವರ ತೋಟದಲ್ಲಿ ಮೇಲ್ಗಡೆ ವಿದ್ಯುತ್‌ ತಂತಿಯು ಹಾದು ಹೋಗಿದ್ದು ವಿದ್ಯುತ್‌ ತಂತಿಗೆ ಶಶಿಧರ್‌ ನಾಯರ್‌ ರವರು ಹಿಡಿದುಕೊಂಡಿದ್ದ ಅಲ್ಯೂಮಿನಿಯಂ ದೋಂಟಿ ಆಕಸ್ಮಿಕವಾಗಿ ತಗುಲಿ ಅದರ ಮೂಲಕ ಶಶಿಧರನ್‌ ರವರ ದೇಹಕ್ಕೆ ವಿದ್ಯುತ್ ಪ್ರವಾಹಿಸಿ ವಿದ್ಯುತ್‌ ಶಾಕ್‌ ಹೊಡೆದು ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಕೇಸು ದಾಖಲಿಸಿದ್ದಾರೆ.

Related posts

ಎಸ್ ಡಿ ಎಂ ಕಾಲೇಜಿನಲ್ಲಿ ಎನ್‌ಐಪಿಎಮ್‌ನ ವಿದ್ಯಾರ್ಥಿ ಘಟಕಕ್ಕೆ ಚಾಲನೆ

Suddi Udaya

ಮಾ14-15 ಎಸ್.ಡಿ.ಎಂ ಝೇಂಕಾರ ಉತ್ಸವ: ಖ್ಯಾತ ನಟ ರಮೇಶ್ ಅರವಿಂದ್ ವಿಶೇಷ ಆಕರ್ಷಣೆ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಐವನ್ ಡಿ’ಸೋಜರವರ ಮೇಲೆ ಕೇಸು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ

Suddi Udaya

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ

Suddi Udaya
error: Content is protected !!