30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

ಬೆಳ್ತಂಗಡಿ: ಅಲ್ಯೂಮಿನಿಯಂ ಏಣಿಯು ಆಕಸ್ಮಿಕವಾಗಿ ವಿದ್ಯುತ್‌ ತಂತಿಗೆ ಸ್ಪರ್ಷಿಸಿ ಕಲ್ಮಂಜ ಗ್ರಾಮದ ಅಂಬಟೆ ಮನೆ ನಿವಾಸಿ, ಕೃಷಿಕ ಶಶಿಧರನ್ ನಾಯರ್ (68) ಸಾವನ್ನಪ್ಪಿದ್ದಾರೆ.

ಆ.12 ರಂದು ಶಶಿಧರನ್ ಅವರು ಮನೆಯ ಹತ್ತಿರ ಇರುವ ತೋಟದ ತೆಂಗಿನ ಮರದಿಂದ ಸೀಯಾಳ ತೆಗೆಯಲೆಂದು ಮನೆಯಲ್ಲಿದ್ದ ಅಲ್ಯುಮಿನಿಯಂ ದೋಂಟಿಯನ್ನು ತೆಗೆದುಕೊಂಡು ಹೋಗಿದ್ದು ಹೋದ ಸ್ವಲ್ಪ ಹೊತ್ತಿನಲ್ಲಿ ಜೋರಾಗಿ ಬೊಬ್ಬೆ ಹಾಕಿದಂತೆ ಶಬ್ದ ಕೇಳಿಬಂದಿತ್ತು. ಈ ವೇಳೆ ಪತ್ನಿ ‌ಜಯಪ್ರಕಾಶಿನಿ ಹಾಗೂ ಮನೆಯಲ್ಲಿದ್ದ ಆಂಟನಿ ಹೋಗಿ ನೋಡಿದಾಗ ಶಶಿಧರ‌ನ್ ಪ್ರಜ್ಞೆ ತಪ್ಪಿ ಬಿದ್ದಿದ್ದರು.

ಕೂಡಲೇ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ದಾಗ‌ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವ ಕಾದಾಡಿ ತಿಳಿಸಿದ್ದಾರೆ.

ಅವರ ತೋಟದಲ್ಲಿ ಮೇಲ್ಗಡೆ ವಿದ್ಯುತ್‌ ತಂತಿಯು ಹಾದು ಹೋಗಿದ್ದು ವಿದ್ಯುತ್‌ ತಂತಿಗೆ ಶಶಿಧರ್‌ ನಾಯರ್‌ ರವರು ಹಿಡಿದುಕೊಂಡಿದ್ದ ಅಲ್ಯೂಮಿನಿಯಂ ದೋಂಟಿ ಆಕಸ್ಮಿಕವಾಗಿ ತಗುಲಿ ಅದರ ಮೂಲಕ ಶಶಿಧರನ್‌ ರವರ ದೇಹಕ್ಕೆ ವಿದ್ಯುತ್ ಪ್ರವಾಹಿಸಿ ವಿದ್ಯುತ್‌ ಶಾಕ್‌ ಹೊಡೆದು ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಕೇಸು ದಾಖಲಿಸಿದ್ದಾರೆ.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ತೆಕ್ಕಾರು ಸರಳಿಕಟ್ಟೆ ಎಸ್.ವೈ.ಎಸ್. ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

Suddi Udaya

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

Suddi Udaya
error: Content is protected !!