23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಚಾಮಾ೯ಡಿ : ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆ- ಜಾನುವಾರು ಸಹಿತ ಓವ೯ಬಂಧನ

ಚಾರ್ಮಾಡಿ : ಮಾಂಸಕ್ಕಾಗಿ ಅಕ್ರಮವಾಗಿ ವಾಹನದಲ್ಲಿ ಜಾನುವಾರು ಸಾಗಾಟದ ಪ್ರಕರಣವನ್ನು ಧಮ೯ಸ್ಥಳ ಪೊಲೀಸರು ಪತ್ತೆ ಹಚ್ಚಿ ಓವ೯ನನ್ನು ಬಂಧಿಸಿದ ಘಟನೆ ಆ.13 ರಂದು ವರದಿಯಾಗಿದೆ.
ಚಾಮಾ೯ಡಿ ಚೆಕ್ ಪೋಸ್ಟ್ ಬಳಿ ಅತಿವೇಗದಲ್ಲಿ ಕೆ ಎ 18 ಸಿ 2855 ನೇ ನೊಂದಣಿ ಸಂಖ್ಯೆಯ ವಾಹನದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಜಾನುವಾರಗಳನ್ನು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದಾಗ ಧರ್ಮಸ್ಥಳ ಠಾಣಾ ಪೊಲೀಸರು ತಡೆದಿದ್ದು, ಈ ವೇಳೆ ಬಂಟ್ವಾಳ ಸಾಲೆತ್ತೂರು ನಿವಾಸಿ ಹಮೀದ್ ಎಂಬಾತನು ಪರಾರಿಯಾಗಿರುತ್ತಾನೆ. ಸದರಿ ವಾಹನದ ಚಾಲಕನನ್ನು ವಿಚಾರಿಸಿದಾಗ ,ಆತ ಮೂಡಿಗೆರೆ ಕೂಡಹಳ್ಳಿ ಗ್ರಾಮದ ಕೆ .ಕೆ ಪದ್ಮೇಶ್ (41ವ) ಎಂಬುದಾಗಿ ತಿಳಿದುಬಂದಿದೆ., ವಾಹನವನ್ನು ಪರಿಶೀಲಿಸಲಾಗಿ 3 ಜಾನುವಾರುಗಳು ಪತ್ತೆಯಾಗಿದೆ . ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 57/2023 ಕಲಂ: 5,7,8,9,12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ -2020 ಮತ್ತು ಕಲಂ:66 ಜೊತೆಗೆ 192(ಎ) ಐ ಎಂ ವಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮಾತನಾಡಿರುವ ವೀಡಿಯೋ ಪ್ರಸಾರ ಪುನೀತ್‌ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣದಾಖಲು

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರಿಂದ ಅತ್ಯಾಚಾರ:ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ವೈಯಕ್ತಿಕ ದ್ವೇಷದ ವಿಚಾರವಾಗಿ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪುಗಳು: ಶಿರ್ಲಾಲು ಗ್ರಾಮಸಭೆಯಲ್ಲಿ ದೇವಸ್ಥಾನದ ಬ್ರಹ್ಮಕಲಶದ ಹಣದ ವಿಚಾರದಲ್ಲಿ ಹೊಡೆದಾಟ

Suddi Udaya

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya
error: Content is protected !!