23.6 C
ಪುತ್ತೂರು, ಬೆಳ್ತಂಗಡಿ
June 9, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

ಬೆಳ್ತಂಗಡಿ: ಅಲ್ಯೂಮಿನಿಯಂ ಏಣಿಯು ಆಕಸ್ಮಿಕವಾಗಿ ವಿದ್ಯುತ್‌ ತಂತಿಗೆ ಸ್ಪರ್ಷಿಸಿ ಕಲ್ಮಂಜ ಗ್ರಾಮದ ಅಂಬಟೆ ಮನೆ ನಿವಾಸಿ, ಕೃಷಿಕ ಶಶಿಧರನ್ ನಾಯರ್ (68) ಸಾವನ್ನಪ್ಪಿದ್ದಾರೆ.

ಆ.12 ರಂದು ಶಶಿಧರನ್ ಅವರು ಮನೆಯ ಹತ್ತಿರ ಇರುವ ತೋಟದ ತೆಂಗಿನ ಮರದಿಂದ ಸೀಯಾಳ ತೆಗೆಯಲೆಂದು ಮನೆಯಲ್ಲಿದ್ದ ಅಲ್ಯುಮಿನಿಯಂ ದೋಂಟಿಯನ್ನು ತೆಗೆದುಕೊಂಡು ಹೋಗಿದ್ದು ಹೋದ ಸ್ವಲ್ಪ ಹೊತ್ತಿನಲ್ಲಿ ಜೋರಾಗಿ ಬೊಬ್ಬೆ ಹಾಕಿದಂತೆ ಶಬ್ದ ಕೇಳಿಬಂದಿತ್ತು. ಈ ವೇಳೆ ಪತ್ನಿ ‌ಜಯಪ್ರಕಾಶಿನಿ ಹಾಗೂ ಮನೆಯಲ್ಲಿದ್ದ ಆಂಟನಿ ಹೋಗಿ ನೋಡಿದಾಗ ಶಶಿಧರ‌ನ್ ಪ್ರಜ್ಞೆ ತಪ್ಪಿ ಬಿದ್ದಿದ್ದರು.

ಕೂಡಲೇ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ದಾಗ‌ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವ ಕಾದಾಡಿ ತಿಳಿಸಿದ್ದಾರೆ.

ಅವರ ತೋಟದಲ್ಲಿ ಮೇಲ್ಗಡೆ ವಿದ್ಯುತ್‌ ತಂತಿಯು ಹಾದು ಹೋಗಿದ್ದು ವಿದ್ಯುತ್‌ ತಂತಿಗೆ ಶಶಿಧರ್‌ ನಾಯರ್‌ ರವರು ಹಿಡಿದುಕೊಂಡಿದ್ದ ಅಲ್ಯೂಮಿನಿಯಂ ದೋಂಟಿ ಆಕಸ್ಮಿಕವಾಗಿ ತಗುಲಿ ಅದರ ಮೂಲಕ ಶಶಿಧರನ್‌ ರವರ ದೇಹಕ್ಕೆ ವಿದ್ಯುತ್ ಪ್ರವಾಹಿಸಿ ವಿದ್ಯುತ್‌ ಶಾಕ್‌ ಹೊಡೆದು ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಕೇಸು ದಾಖಲಿಸಿದ್ದಾರೆ.

Related posts

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಪ್ರಬಂಧ ಸ್ಪರ್ಧೆ: ಅರ್ಪಿತಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya

2೦47ರಲ್ಲಿ ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಮನಃಶಾಸ್ತ್ರ ವಿಭಾಗದಿಂದ ಕಾರ್ಯಾಗಾರ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya
error: Content is protected !!