July 27, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

ಬೆಳ್ತಂಗಡಿ: ಅಲ್ಯೂಮಿನಿಯಂ ಏಣಿಯು ಆಕಸ್ಮಿಕವಾಗಿ ವಿದ್ಯುತ್‌ ತಂತಿಗೆ ಸ್ಪರ್ಷಿಸಿ ಕಲ್ಮಂಜ ಗ್ರಾಮದ ಅಂಬಟೆ ಮನೆ ನಿವಾಸಿ, ಕೃಷಿಕ ಶಶಿಧರನ್ ನಾಯರ್ (68) ಸಾವನ್ನಪ್ಪಿದ್ದಾರೆ.

ಆ.12 ರಂದು ಶಶಿಧರನ್ ಅವರು ಮನೆಯ ಹತ್ತಿರ ಇರುವ ತೋಟದ ತೆಂಗಿನ ಮರದಿಂದ ಸೀಯಾಳ ತೆಗೆಯಲೆಂದು ಮನೆಯಲ್ಲಿದ್ದ ಅಲ್ಯುಮಿನಿಯಂ ದೋಂಟಿಯನ್ನು ತೆಗೆದುಕೊಂಡು ಹೋಗಿದ್ದು ಹೋದ ಸ್ವಲ್ಪ ಹೊತ್ತಿನಲ್ಲಿ ಜೋರಾಗಿ ಬೊಬ್ಬೆ ಹಾಕಿದಂತೆ ಶಬ್ದ ಕೇಳಿಬಂದಿತ್ತು. ಈ ವೇಳೆ ಪತ್ನಿ ‌ಜಯಪ್ರಕಾಶಿನಿ ಹಾಗೂ ಮನೆಯಲ್ಲಿದ್ದ ಆಂಟನಿ ಹೋಗಿ ನೋಡಿದಾಗ ಶಶಿಧರ‌ನ್ ಪ್ರಜ್ಞೆ ತಪ್ಪಿ ಬಿದ್ದಿದ್ದರು.

ಕೂಡಲೇ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ದಾಗ‌ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವ ಕಾದಾಡಿ ತಿಳಿಸಿದ್ದಾರೆ.

ಅವರ ತೋಟದಲ್ಲಿ ಮೇಲ್ಗಡೆ ವಿದ್ಯುತ್‌ ತಂತಿಯು ಹಾದು ಹೋಗಿದ್ದು ವಿದ್ಯುತ್‌ ತಂತಿಗೆ ಶಶಿಧರ್‌ ನಾಯರ್‌ ರವರು ಹಿಡಿದುಕೊಂಡಿದ್ದ ಅಲ್ಯೂಮಿನಿಯಂ ದೋಂಟಿ ಆಕಸ್ಮಿಕವಾಗಿ ತಗುಲಿ ಅದರ ಮೂಲಕ ಶಶಿಧರನ್‌ ರವರ ದೇಹಕ್ಕೆ ವಿದ್ಯುತ್ ಪ್ರವಾಹಿಸಿ ವಿದ್ಯುತ್‌ ಶಾಕ್‌ ಹೊಡೆದು ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಕೇಸು ದಾಖಲಿಸಿದ್ದಾರೆ.

Related posts

ಅರಸಿನಮಕ್ಕಿ ಗ್ರಾ.ಪಂ. ಹಿಂದಿನ ಉಪಾಧ್ಯಕ್ಷೆ ಶಕುಂತಲಾ ಆಚಾರ್ ರಿಗೆ ಬೀಳ್ಕೊಡುಗೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ಭೇಟಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಅಂಡಿಂಜೆ: ಗಾಂದೋಟ್ಯ ನಿವಾಸಿ ಲಲಿತ ನಿಧನ

Suddi Udaya

ಇನ್ನೂ ಡಾಮರೀಕರಣ ಕಾಣದ ಲಾಯಿಲ ಗ್ರಾ.ಪಂ. ವ್ಯಾಪ್ತಿಯ ರಸ್ತೆಗಳು

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆಗೆ ಶರಣು

Suddi Udaya
error: Content is protected !!