28.1 C
ಪುತ್ತೂರು, ಬೆಳ್ತಂಗಡಿ
September 10, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಅಲ್ಯುಮಿನಿಯಂ ದೋಂಟಿಗೆ ವಿದ್ಯುತ್ ಸ್ಪರ್ಷ: ಸಿಹಿಯಾಳ ತೆಗೆಯುತ್ತಿದ್ದ ಕೃಷಿಕ ಸಾವು

ಬೆಳ್ತಂಗಡಿ: ಅಲ್ಯೂಮಿನಿಯಂ ಏಣಿಯು ಆಕಸ್ಮಿಕವಾಗಿ ವಿದ್ಯುತ್‌ ತಂತಿಗೆ ಸ್ಪರ್ಷಿಸಿ ಕಲ್ಮಂಜ ಗ್ರಾಮದ ಅಂಬಟೆ ಮನೆ ನಿವಾಸಿ, ಕೃಷಿಕ ಶಶಿಧರನ್ ನಾಯರ್ (68) ಸಾವನ್ನಪ್ಪಿದ್ದಾರೆ.

ಆ.12 ರಂದು ಶಶಿಧರನ್ ಅವರು ಮನೆಯ ಹತ್ತಿರ ಇರುವ ತೋಟದ ತೆಂಗಿನ ಮರದಿಂದ ಸೀಯಾಳ ತೆಗೆಯಲೆಂದು ಮನೆಯಲ್ಲಿದ್ದ ಅಲ್ಯುಮಿನಿಯಂ ದೋಂಟಿಯನ್ನು ತೆಗೆದುಕೊಂಡು ಹೋಗಿದ್ದು ಹೋದ ಸ್ವಲ್ಪ ಹೊತ್ತಿನಲ್ಲಿ ಜೋರಾಗಿ ಬೊಬ್ಬೆ ಹಾಕಿದಂತೆ ಶಬ್ದ ಕೇಳಿಬಂದಿತ್ತು. ಈ ವೇಳೆ ಪತ್ನಿ ‌ಜಯಪ್ರಕಾಶಿನಿ ಹಾಗೂ ಮನೆಯಲ್ಲಿದ್ದ ಆಂಟನಿ ಹೋಗಿ ನೋಡಿದಾಗ ಶಶಿಧರ‌ನ್ ಪ್ರಜ್ಞೆ ತಪ್ಪಿ ಬಿದ್ದಿದ್ದರು.

ಕೂಡಲೇ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದೊಯ್ದಾಗ‌ ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವ ಕಾದಾಡಿ ತಿಳಿಸಿದ್ದಾರೆ.

ಅವರ ತೋಟದಲ್ಲಿ ಮೇಲ್ಗಡೆ ವಿದ್ಯುತ್‌ ತಂತಿಯು ಹಾದು ಹೋಗಿದ್ದು ವಿದ್ಯುತ್‌ ತಂತಿಗೆ ಶಶಿಧರ್‌ ನಾಯರ್‌ ರವರು ಹಿಡಿದುಕೊಂಡಿದ್ದ ಅಲ್ಯೂಮಿನಿಯಂ ದೋಂಟಿ ಆಕಸ್ಮಿಕವಾಗಿ ತಗುಲಿ ಅದರ ಮೂಲಕ ಶಶಿಧರನ್‌ ರವರ ದೇಹಕ್ಕೆ ವಿದ್ಯುತ್ ಪ್ರವಾಹಿಸಿ ವಿದ್ಯುತ್‌ ಶಾಕ್‌ ಹೊಡೆದು ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಕೇಸು ದಾಖಲಿಸಿದ್ದಾರೆ.

Related posts

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ ರವರ ಸೇವಾರ್ಥದಲ್ಲಿ 108 ಸೀಯಾಳಭಿಷೇಕ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪ.ಪೂ. ವಿಭಾಗದ ವಿದ್ಯಾರ್ಥಿ‌‌ ಸಂಘದ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಸುರೇಶ್ ವಿ ಅವರಿಗೆ ಸೇವಾ ನಿವೃತ್ತಿ, ಕಾಲೇಜಿನಲ್ಲಿ ಬಿಳ್ಕೋಡುಗೆ ಸಮಾರಂಭ, ಕಾಲೇಜು ಹಾಗೂ ಹಳೆ ವಿದ್ಯಾರ್ಥಿಗಳಿಂದ ಸನ್ಮಾನ

Suddi Udaya

ಮಾದರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ರಿಯಾನ್ಷ್ ಮುಂಡಾಜೆ :ಎಂಡೋ ಪೀಡಿತ ಬಾಲೆಗೆ ಆಹಾರದ ಕಿಟ್, ಆರ್ಥಿಕ ನೆರವು ಹಸ್ತಾಂತರ

Suddi Udaya

ನಿರಾಶ್ರಿತರಲ್ಲಿ ಹೃದಯಗಳ ಬೆಸುಗೆ” — ತೊಡಂಬಿಲ ಸೇಕ್ರೆಡ್ ಹಾರ್ಟ್ ಚರ್ಚ್‌ನಿಂದ ಸಿಯೋನ್ ಆಶ್ರಮಕ್ಕೆ ನೆರವು

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಯವರ ಆಶೀರ್ವಾದ ಪಡೆದ ವಿಧಾನಪರಿಷತ್ ಮಾಜಿ ಶಾಸಕ,ಮೆಸ್ಕಾಂ ಅಧ್ಯಕ್ಷ ಕೆ.ಹರೀಶ್ ಕುಮಾರ್ ದಂಪತಿ

Suddi Udaya
error: Content is protected !!