25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಚಾಮಾ೯ಡಿ : ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆ- ಜಾನುವಾರು ಸಹಿತ ಓವ೯ಬಂಧನ

ಚಾರ್ಮಾಡಿ : ಮಾಂಸಕ್ಕಾಗಿ ಅಕ್ರಮವಾಗಿ ವಾಹನದಲ್ಲಿ ಜಾನುವಾರು ಸಾಗಾಟದ ಪ್ರಕರಣವನ್ನು ಧಮ೯ಸ್ಥಳ ಪೊಲೀಸರು ಪತ್ತೆ ಹಚ್ಚಿ ಓವ೯ನನ್ನು ಬಂಧಿಸಿದ ಘಟನೆ ಆ.13 ರಂದು ವರದಿಯಾಗಿದೆ.
ಚಾಮಾ೯ಡಿ ಚೆಕ್ ಪೋಸ್ಟ್ ಬಳಿ ಅತಿವೇಗದಲ್ಲಿ ಕೆ ಎ 18 ಸಿ 2855 ನೇ ನೊಂದಣಿ ಸಂಖ್ಯೆಯ ವಾಹನದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಜಾನುವಾರಗಳನ್ನು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದಾಗ ಧರ್ಮಸ್ಥಳ ಠಾಣಾ ಪೊಲೀಸರು ತಡೆದಿದ್ದು, ಈ ವೇಳೆ ಬಂಟ್ವಾಳ ಸಾಲೆತ್ತೂರು ನಿವಾಸಿ ಹಮೀದ್ ಎಂಬಾತನು ಪರಾರಿಯಾಗಿರುತ್ತಾನೆ. ಸದರಿ ವಾಹನದ ಚಾಲಕನನ್ನು ವಿಚಾರಿಸಿದಾಗ ,ಆತ ಮೂಡಿಗೆರೆ ಕೂಡಹಳ್ಳಿ ಗ್ರಾಮದ ಕೆ .ಕೆ ಪದ್ಮೇಶ್ (41ವ) ಎಂಬುದಾಗಿ ತಿಳಿದುಬಂದಿದೆ., ವಾಹನವನ್ನು ಪರಿಶೀಲಿಸಲಾಗಿ 3 ಜಾನುವಾರುಗಳು ಪತ್ತೆಯಾಗಿದೆ . ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 57/2023 ಕಲಂ: 5,7,8,9,12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ -2020 ಮತ್ತು ಕಲಂ:66 ಜೊತೆಗೆ 192(ಎ) ಐ ಎಂ ವಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ: ತುಮಕೂರು ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ: ಮುರುಡೇಶ್ವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya

ಧರ್ಮಸ್ಥಳ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ ವ್ಯಕ್ತಿ : ಎಸ್ಪಿ ಕಚೇರಿಗೆ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ ವ್ಯಕ್ತಿ

Suddi Udaya

ಕುತ್ಲೂರು ಪ್ರಕರಣ ನಕ್ಸಲ್ ಮುಖಂಡ ಮಹೇಶ್ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಕ್ಯಾಂಟಿನ್ ಒಳಗಡೆ ವೇಶ್ಯಾವಟಿಕೆ ದಂಧೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya
error: Content is protected !!