26.1 C
ಪುತ್ತೂರು, ಬೆಳ್ತಂಗಡಿ
September 10, 2026
ಅಪರಾಧ ಸುದ್ದಿ

ಚಾಮಾ೯ಡಿ : ಅಕ್ರಮ ಜಾನುವಾರು ಸಾಗಾಟ ಪ್ರಕರಣ ಪತ್ತೆ- ಜಾನುವಾರು ಸಹಿತ ಓವ೯ಬಂಧನ

ಚಾರ್ಮಾಡಿ : ಮಾಂಸಕ್ಕಾಗಿ ಅಕ್ರಮವಾಗಿ ವಾಹನದಲ್ಲಿ ಜಾನುವಾರು ಸಾಗಾಟದ ಪ್ರಕರಣವನ್ನು ಧಮ೯ಸ್ಥಳ ಪೊಲೀಸರು ಪತ್ತೆ ಹಚ್ಚಿ ಓವ೯ನನ್ನು ಬಂಧಿಸಿದ ಘಟನೆ ಆ.13 ರಂದು ವರದಿಯಾಗಿದೆ.
ಚಾಮಾ೯ಡಿ ಚೆಕ್ ಪೋಸ್ಟ್ ಬಳಿ ಅತಿವೇಗದಲ್ಲಿ ಕೆ ಎ 18 ಸಿ 2855 ನೇ ನೊಂದಣಿ ಸಂಖ್ಯೆಯ ವಾಹನದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಜಾನುವಾರಗಳನ್ನು ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿದ್ದಾಗ ಧರ್ಮಸ್ಥಳ ಠಾಣಾ ಪೊಲೀಸರು ತಡೆದಿದ್ದು, ಈ ವೇಳೆ ಬಂಟ್ವಾಳ ಸಾಲೆತ್ತೂರು ನಿವಾಸಿ ಹಮೀದ್ ಎಂಬಾತನು ಪರಾರಿಯಾಗಿರುತ್ತಾನೆ. ಸದರಿ ವಾಹನದ ಚಾಲಕನನ್ನು ವಿಚಾರಿಸಿದಾಗ ,ಆತ ಮೂಡಿಗೆರೆ ಕೂಡಹಳ್ಳಿ ಗ್ರಾಮದ ಕೆ .ಕೆ ಪದ್ಮೇಶ್ (41ವ) ಎಂಬುದಾಗಿ ತಿಳಿದುಬಂದಿದೆ., ವಾಹನವನ್ನು ಪರಿಶೀಲಿಸಲಾಗಿ 3 ಜಾನುವಾರುಗಳು ಪತ್ತೆಯಾಗಿದೆ . ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 57/2023 ಕಲಂ: 5,7,8,9,12 ಕರ್ನಾಟಕ ಗೋ ಹತ್ಯೆ ನಿಷೇಧ ಕಾಯಿದೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ -2020 ಮತ್ತು ಕಲಂ:66 ಜೊತೆಗೆ 192(ಎ) ಐ ಎಂ ವಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಬೆಳ್ತಂಗಡಿ: ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಿಡುಗಡೆ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ನಕ್ಸಲ್ ನಾಯಕ ರೂಪೇಶ್ ಪೊಲೀಸ್ ಕಸ್ಟಡಿ ಅಂತ್ಯ ಬೆಳ್ತಂಗಡಿ ನ್ಯಾಯಾಲಯಗೆ ಹಾಜರುಪಡಿಸಿ ಮತ್ತೆ ಕೇರಳ ಜೈಲಿಗೆ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!