September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

ವೇಣೂರು: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ನೇತೃತ್ವದಲ್ಲಿ ಮೂಡುಕೋಡಿಯ ನಡ್ತಿಕಲ್ಲು ಶ್ರೀರಾಮ ಭಜನ ಮಂಡಳಿ ಇದರ ಸಹಭಾಗಿತ್ವದಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಮೇಳವು ಆ.12ರಂದು ಮೂಡುಕೋಡಿಯ ನಡ್ತಿಕಲ್ಲು ಶ್ರೀರಾಮ ಭಜನ ಮಂದಿರದಲ್ಲಿ ಉದ್ಘಾಟನೆಗೊಂಡಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ.ಯ ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ ಅವರು ಕಾರ್ಯಕ್ರಮ ಉದ್ಘಾಟಿಸಿ, ಸರಕಾರ ತರುವ ಹಲವಾರು ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವುದು ಸವಾಲಿನ ಕೆಲಸವಾಗಿದೆ. ಇಂತಹ ಶಿಬಿರಗಳ ಮೂಲಕ ಗ್ರಾಮೀಣ ಭಾಗದ ಜನರು ತಮ್ಮ ದಾಖಲೆಗಳನ್ನು ನವೀಕರಣ ಮಾಡಲು ಸುಲಭಸಾಧ್ಯವಾಗಲಿದ್ದು, ಸರಕಾರಿ ಯೋಜನೆಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು.

ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ ಬಿ.ಇ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವೇಣೂರು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಮೆನೇಜರ್ ವಿಶ್ವೇಶ್ವರ್, ನಡ್ತಿಕಲ್ಲು ಶ್ರೀರಾಮ ಭಜನ ಮಂಡಳಿ ಅಧ್ಯಕ್ಷ ಪ್ರವೀಣ್ ಆಚಾರ್ಯ, ಅಂಚೆ ಇಲಾಖೆಯ ಹರೀಶ್ ಕಾಶಿಪಟ್ಣ, ವೇಣೂರು ಗ್ರಾ.ಪಂ. ಸದಸ್ಯರಾದ ಉಮೇಶ್ ಎನ್., ವೀಣಾ ದೇವಾಡಿಗ, ಮೂಡುಕೋಡಿ ಹಾಲು ಉ.ಸ. ಸಂಘದ ಅಧ್ಯಕ್ಷರಾದ ಪ್ರಕಾಶ್ ಭಟ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಯೂಟ್ಯೂಬರ್ ಸಮೀರ್ ಎಮ್.ಡಿ ಎರಡು ಮನೆಗೆ ಪೊಲೀಸ್ ಎಂಟ್ರಿ

Suddi Udaya

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಆಷಾಡ ಹಾಗೂ ಮಾನ್ಸೂನ್ ಆಫರ್ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ಏ.18: ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಮಂದಾರ ಸಂಭ್ರಮ-2026

Suddi Udaya

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 1.25 ಲಕ್ಷ ಲಾಭ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya
error: Content is protected !!