July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

ವೇಣೂರು: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ನೇತೃತ್ವದಲ್ಲಿ ಮೂಡುಕೋಡಿಯ ನಡ್ತಿಕಲ್ಲು ಶ್ರೀರಾಮ ಭಜನ ಮಂಡಳಿ ಇದರ ಸಹಭಾಗಿತ್ವದಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಮೇಳವು ಆ.12ರಂದು ಮೂಡುಕೋಡಿಯ ನಡ್ತಿಕಲ್ಲು ಶ್ರೀರಾಮ ಭಜನ ಮಂದಿರದಲ್ಲಿ ಉದ್ಘಾಟನೆಗೊಂಡಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ.ಯ ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ ಅವರು ಕಾರ್ಯಕ್ರಮ ಉದ್ಘಾಟಿಸಿ, ಸರಕಾರ ತರುವ ಹಲವಾರು ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವುದು ಸವಾಲಿನ ಕೆಲಸವಾಗಿದೆ. ಇಂತಹ ಶಿಬಿರಗಳ ಮೂಲಕ ಗ್ರಾಮೀಣ ಭಾಗದ ಜನರು ತಮ್ಮ ದಾಖಲೆಗಳನ್ನು ನವೀಕರಣ ಮಾಡಲು ಸುಲಭಸಾಧ್ಯವಾಗಲಿದ್ದು, ಸರಕಾರಿ ಯೋಜನೆಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು.

ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ ಬಿ.ಇ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವೇಣೂರು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಮೆನೇಜರ್ ವಿಶ್ವೇಶ್ವರ್, ನಡ್ತಿಕಲ್ಲು ಶ್ರೀರಾಮ ಭಜನ ಮಂಡಳಿ ಅಧ್ಯಕ್ಷ ಪ್ರವೀಣ್ ಆಚಾರ್ಯ, ಅಂಚೆ ಇಲಾಖೆಯ ಹರೀಶ್ ಕಾಶಿಪಟ್ಣ, ವೇಣೂರು ಗ್ರಾ.ಪಂ. ಸದಸ್ಯರಾದ ಉಮೇಶ್ ಎನ್., ವೀಣಾ ದೇವಾಡಿಗ, ಮೂಡುಕೋಡಿ ಹಾಲು ಉ.ಸ. ಸಂಘದ ಅಧ್ಯಕ್ಷರಾದ ಪ್ರಕಾಶ್ ಭಟ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ತಾಲೂಕಿನಲ್ಲಿ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಇದಕ್ಕೆ ಪರ್ಯಾಯವಾದ ಯಾವುದೇ ಮಾಜಿ ಸೈನಿಕರ ಸಂಘವಿರುವುದಿಲ್ಲ: ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಮಹಮ್ಮದ್ ರಫೀ ಸ್ವಷ್ಟನೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಬೀಳ್ಕೊಡುಗೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಚಲನಚಿತ್ರ ನಿರ್ದೇಶಕ ವಿನು ಬಳಂಜ

Suddi Udaya
error: Content is protected !!