22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಡ್ತಿಕಲ್ಲು: ಆಧಾರ್ ನೋಂದಣಿ-ತಿದ್ದುಪಡಿ ಶಿಬಿರದ ಉದ್ಘಾಟನೆ

ವೇಣೂರು: ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ನೇತೃತ್ವದಲ್ಲಿ ಮೂಡುಕೋಡಿಯ ನಡ್ತಿಕಲ್ಲು ಶ್ರೀರಾಮ ಭಜನ ಮಂಡಳಿ ಇದರ ಸಹಭಾಗಿತ್ವದಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಮೇಳವು ಆ.12ರಂದು ಮೂಡುಕೋಡಿಯ ನಡ್ತಿಕಲ್ಲು ಶ್ರೀರಾಮ ಭಜನ ಮಂದಿರದಲ್ಲಿ ಉದ್ಘಾಟನೆಗೊಂಡಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ.ಯ ಗುರುವಾಯನಕೆರೆ ಯೋಜನಾಧಿಕಾರಿ ದಯಾನಂದ ಅವರು ಕಾರ್ಯಕ್ರಮ ಉದ್ಘಾಟಿಸಿ, ಸರಕಾರ ತರುವ ಹಲವಾರು ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವುದು ಸವಾಲಿನ ಕೆಲಸವಾಗಿದೆ. ಇಂತಹ ಶಿಬಿರಗಳ ಮೂಲಕ ಗ್ರಾಮೀಣ ಭಾಗದ ಜನರು ತಮ್ಮ ದಾಖಲೆಗಳನ್ನು ನವೀಕರಣ ಮಾಡಲು ಸುಲಭಸಾಧ್ಯವಾಗಲಿದ್ದು, ಸರಕಾರಿ ಯೋಜನೆಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು.

ವೇಣೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸುಂದರ ಹೆಗ್ಡೆ ಬಿ.ಇ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವೇಣೂರು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಮೆನೇಜರ್ ವಿಶ್ವೇಶ್ವರ್, ನಡ್ತಿಕಲ್ಲು ಶ್ರೀರಾಮ ಭಜನ ಮಂಡಳಿ ಅಧ್ಯಕ್ಷ ಪ್ರವೀಣ್ ಆಚಾರ್ಯ, ಅಂಚೆ ಇಲಾಖೆಯ ಹರೀಶ್ ಕಾಶಿಪಟ್ಣ, ವೇಣೂರು ಗ್ರಾ.ಪಂ. ಸದಸ್ಯರಾದ ಉಮೇಶ್ ಎನ್., ವೀಣಾ ದೇವಾಡಿಗ, ಮೂಡುಕೋಡಿ ಹಾಲು ಉ.ಸ. ಸಂಘದ ಅಧ್ಯಕ್ಷರಾದ ಪ್ರಕಾಶ್ ಭಟ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಶ್ರೀ ಕೃಷ್ಣಜನ್ಮಾಷ್ಟಮಿ ಸಮಿತಿಗೆ 37ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ, ಸಾಮಾಜಿಕ ಕ್ಷೇತ್ರದ ಮುಂದಾಳು ಪ್ರಶಾಂತ್ ಎಂ. ಪಾರೆಂಕಿ ಗೌರವಾಧ್ಯಕ್ಷರಾಗಿ ಸಮಾಜಸೇವಕ, ಉದ್ಯಮಿ ಹಾಗೂ ಕೊಡುಗೈ ದಾನಿ ಪದ್ಮನಾಭ ಸುವರ್ಣ ಬಳ್ಳಮಂಜ

Suddi Udaya

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಹುಟ್ಟೂರ ಸಮ್ಮಾನ

Suddi Udaya
error: Content is protected !!