September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ 2023-24 ನೇ ಸಾಲಿನ ಶಿಕ್ಷಕ ರಕ್ಷಕ ಸಂಘದ ಸಭೆಯು ಆ.12 ರಂದು ನಡೆಯಿತು. ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪ್ರೌಢಶಾಲಾ, ಹಿರಿಯ ಪ್ರಾಥಮಿಕ, ಕಿರಿಯ ಪ್ರಾಥಮಿಕ, ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕ-ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಜಯಂತಿ, ಜಗದೀಶ್, ಪ್ರಶಾಂತ್, ಗಣೇಶ್ ಕುಂದರ್ ಇವರು ಆಯ್ಕೆಗೊಂಡರು.

ಕುಂಭಶ್ರೀ ವೈಭವದ ಮಾಜಿ ಅಧ್ಯಕ್ಷ ಹರೀಶ್ ಪೊಕ್ಕಿಯವರು ಶಾಲೆಯ ಶೈಕ್ಷಣಿಕ ಪ್ರಗತಿಯು ಉತ್ತಮ ಮಟ್ಟದಲ್ಲಿ ಬೆಳೆಯುತ್ತಿದೆ ಶಾಲೆಯ ಪ್ರಗತಿಗೆ ಎಲ್ಲರ ಸಹಕಾರ ಅತ್ಯಗತ್ಯ ಎಂದರು. ಶಾಲಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶ್ವಿತ್ ಕುಲಾಲ್ ಶಾಲಾ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ವಿವರವಾಗಿ ತಿಳಿಸಿದರು.

ಸಭೆಯ ಅಧ್ಯಕ್ಷರಾದ, ಶಾಲಾ ಸಂಚಾಲಕ ಗಿರೀಶ್ ಕೆ.ಎಚ್ ಶಾಲೆ ಇಷ್ಟು ಎತ್ತರಕ್ಕೆ ಬೆಳೆಯಬೇಕಾದರೆ ಪೋಷಕರೇ ಕಾರಣ ಅದೇ ರೀತಿ ಮಕ್ಕಳಿಗೆ ಯಾವುದೇ ಕಾರಣಕ್ಕೂ ಮೊಬೈಲ್ ಕೊಡಬೇಡಿ ಎಂದು ಪೋಷಕರಿಗೆ ಕಿವಿಮಾತು ನೀಡಿದರು. ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿ ಉಷಾ.ಜಿ , ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಅಕ್ಷತಾ, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಪವಿತ್ರ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಶೋಭಾ ಎಲ್. ಎನ್. ರಾವ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಮತ್ತು ಪೋಷಕರು ಉಪಸ್ಥಿತರಿದ್ದರು.

ಕಿರಿಯ ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ರೀಮತಿ ಶ್ವೇತಾ ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕಿ ಗೌತಮಿ ನಿರೂಪಿಸಿ, ಹಿರಿಯ ಪ್ರಾಥಮಿಕ ವಿಭಾಗದ ಶಿಕ್ಷಕಿ ವಾಣಿ ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಉಪ ಮುಖ್ಯಶಿಕ್ಷಕಿ ಮಮತಾ ಶಾಂತಿ ವಂದಿಸಿದರು.

Related posts

ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮನೆ ಮನೆ ಜಾಥಾ ಅಭಿಯಾನ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ಬಸ್ಸಿನಲ್ಲಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ಕಲ್ಲೇರಿ ನಿವಾಸಿ ಇರ್ಫಾನ್ ಬಂಧನ

Suddi Udaya

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!