24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ 2023-24 ನೇ ಸಾಲಿನ ಶಿಕ್ಷಕ ರಕ್ಷಕ ಸಂಘದ ಸಭೆಯು ಆ.12 ರಂದು ನಡೆಯಿತು. ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪ್ರೌಢಶಾಲಾ, ಹಿರಿಯ ಪ್ರಾಥಮಿಕ, ಕಿರಿಯ ಪ್ರಾಥಮಿಕ, ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕ-ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಜಯಂತಿ, ಜಗದೀಶ್, ಪ್ರಶಾಂತ್, ಗಣೇಶ್ ಕುಂದರ್ ಇವರು ಆಯ್ಕೆಗೊಂಡರು.

ಕುಂಭಶ್ರೀ ವೈಭವದ ಮಾಜಿ ಅಧ್ಯಕ್ಷ ಹರೀಶ್ ಪೊಕ್ಕಿಯವರು ಶಾಲೆಯ ಶೈಕ್ಷಣಿಕ ಪ್ರಗತಿಯು ಉತ್ತಮ ಮಟ್ಟದಲ್ಲಿ ಬೆಳೆಯುತ್ತಿದೆ ಶಾಲೆಯ ಪ್ರಗತಿಗೆ ಎಲ್ಲರ ಸಹಕಾರ ಅತ್ಯಗತ್ಯ ಎಂದರು. ಶಾಲಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಶ್ವಿತ್ ಕುಲಾಲ್ ಶಾಲಾ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ವಿವರವಾಗಿ ತಿಳಿಸಿದರು.

ಸಭೆಯ ಅಧ್ಯಕ್ಷರಾದ, ಶಾಲಾ ಸಂಚಾಲಕ ಗಿರೀಶ್ ಕೆ.ಎಚ್ ಶಾಲೆ ಇಷ್ಟು ಎತ್ತರಕ್ಕೆ ಬೆಳೆಯಬೇಕಾದರೆ ಪೋಷಕರೇ ಕಾರಣ ಅದೇ ರೀತಿ ಮಕ್ಕಳಿಗೆ ಯಾವುದೇ ಕಾರಣಕ್ಕೂ ಮೊಬೈಲ್ ಕೊಡಬೇಡಿ ಎಂದು ಪೋಷಕರಿಗೆ ಕಿವಿಮಾತು ನೀಡಿದರು. ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿ ಉಷಾ.ಜಿ , ಹಿರಿಯ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಅಕ್ಷತಾ, ಕಿರಿಯ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಪವಿತ್ರ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿ ಶೋಭಾ ಎಲ್. ಎನ್. ರಾವ್ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಮತ್ತು ಪೋಷಕರು ಉಪಸ್ಥಿತರಿದ್ದರು.

ಕಿರಿಯ ಪ್ರಾಥಮಿಕ ವಿಭಾಗದ ಶಿಕ್ಷಕಿ ಶ್ರೀಮತಿ ಶ್ವೇತಾ ಮತ್ತು ಪ್ರೌಢಶಾಲಾ ವಿಭಾಗದ ಶಿಕ್ಷಕಿ ಗೌತಮಿ ನಿರೂಪಿಸಿ, ಹಿರಿಯ ಪ್ರಾಥಮಿಕ ವಿಭಾಗದ ಶಿಕ್ಷಕಿ ವಾಣಿ ಸ್ವಾಗತಿಸಿ, ಪ್ರೌಢಶಾಲಾ ವಿಭಾಗದ ಉಪ ಮುಖ್ಯಶಿಕ್ಷಕಿ ಮಮತಾ ಶಾಂತಿ ವಂದಿಸಿದರು.

Related posts

ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪೆಟ್ರೋಲು, ಡೀಸೆಲ್ ಏರಿಕೆ ಬೆನ್ನಲ್ಲೇ ಸಿಎನ್‌ಜಿ ದರ 2 ರೂ.ಗೆ ಏರಿಕೆ

Suddi Udaya

ದಕ್ಷಿಣ ಕನ್ನಡ: ಬೆಳ್ತಂಗಡಿ ಸೇರಿದಂತೆ 5 ತಾಲೂಕುಗಳಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ

Suddi Udaya

ಡಾ| ಸಲೀಂ ಗರ್ಡಾಡಿ ಅವರಿಗೆ ‘ವಿಶ್ವ ಕನ್ನಡ ಕಣ್ಮಣಿ ರಾಜ್ಯೋತ್ಸವ ರಾಜ್ಯ ಪ್ರಶಸ್ತಿ’

Suddi Udaya

ನಾಳೆಯಿಂದ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟ ಉದ್ಘಾಟನೆ

Suddi Udaya

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

Suddi Udaya
error: Content is protected !!